ರಕ್ತ ಶುದ್ಧೀಕರಣ: ರಕ್ತಕ್ಕೆ ಸಂಬಂಧಿಸಿದ ಅನೇಕ ತೊಂದರೆಗಳನ್ನು ನೀಗಿಸುವಲ್ಲಿ ಹಾಗಲ ಕಾಯಿಯದು ಮೊದಲ ಸ್ಥಾನ. ಕೆಟ್ಟ ರಕ್ತದಿಂದ ಉಂಟಾಗುವ ಹುಣ್ಣು, ಚರ್ಮದ ತುರಿಕೆ ಮತ್ತು ಕೀವು ಸೋರುವುದನ್ನು ತಡೆಯುತ್ತದೆ. ನಿಂಬೆಹಣ್ಣು ಮತ್ತು ಸ್ವಲ್ಪ ಜೇನಿನೊಂದಿಗೆ ಇದನ್ನು ಸೇವಿಸುತ್ತ ಬಂದರೆ ಕ್ರಮೇಣ ರಕ್ತ ಶುದ್ಧಿಯಾಗುತ್ತದೆ. ಕಾಲರಾ, ಜಾಂಡೀಸ್ ನಂತಹ ಅಪಾಯಕಾರಿ ರೋಗಗಳ ತಡೆಗೆ ಇದು ರಾಮಬಾಣ. ಅಷ್ಟೇ ಅಲ್ಲ, ಹುಳುಕಡ್ಡಿ ಮುಂತಾದ ಅಲರ್ಜಿ ಸಂಬಂಧಿತ ಕಾಯಿಲೆಗಳನ್ನು ಅತಿ ಬೇಗ ಗುಣಪಡಿಸುತ್ತದೆ. ಮಧುಮೇಹ: ಕಹಿಯಾದ ಹಾಗಲಕಾಯಿಯಲ್ಲಿನ ಹೈಪೊಗ್ಲೈಸಮಿಕ್ ಎಂಬ ನೈಸರ್ಗಿಕContinue reading “ಹಾಗಲಕಾಯಿ: ಉಪಯೋಗ ಹಲವಾರು”
Daily Archives: June 7, 2020
ರಾಜ್ಯದಲ್ಲಿ ಇಂದು ಕೊರೋನಾಘಾತ : 239 ಜನರಿಗೆ ಕೊರೋನಾ ಪತ್ತೆ
ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು ದಾಖಲೆಯ 239 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5452ಕ್ಕೆ ಏರಿಕೆಯಾಗಿದೆ. ಇವರಲ್ಲಿ 2132 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3257 ಆಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಕಲಬುರ್ಗಿ –Continue reading “ರಾಜ್ಯದಲ್ಲಿ ಇಂದು ಕೊರೋನಾಘಾತ : 239 ಜನರಿಗೆ ಕೊರೋನಾ ಪತ್ತೆ”
ಸ್ಯಾಂಡಲ್ವುಡ್ನ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವು
ಬೆಂಗಳೂರು (ಜೂ.7): ಸ್ಯಾಂಡಲ್ವುಡ್ ಪಾಲಿಗೆ ಭಾನುವಾರ ಕಹಿ ದಿನವಾಗಿ ಮಾರ್ಪಾಡಾಗಿದೆ. ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದ್ದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಸ್ಯಾಂಡಲ್ವುಡ್ನಲ್ಲಿ ತಮ್ಮದೇ ಛಾಪು ಮೂಡಿಸಿದ್ದ ನಟ ಚಿರಂಜೀವಿ ಸರ್ಜಾ ಇಂದು ಮೃತಪಟ್ಟಿದ್ದಾರೆ. ಇದು ಸಾವಿರಾರು ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ ವಯುಸ್ಸು ಚಿಕ್ಕದಾದ್ದರಿಂದ ಇದು ಹೃದಯ ಸಂಬಂಧಿ ಕಾಯಿಲೆContinue reading “ಸ್ಯಾಂಡಲ್ವುಡ್ನ ಖ್ಯಾತ ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಸಾವು”
ವಾಟ್ಸ್ ಆ್ಯಪ್ ಹೇಗೆ ದುಡ್ಡು ಮಾಡುತ್ತೆ ಅಂತ ನಿಮ್ಗೆ ಗೊತ್ತಾ?
ವಾಟ್ಸ್ಆ್ಯಪ್ ಅತ್ಯಂತ ವೇಗವಾಗಿ ಸಂದೇಶ ರವಾನೆ ಮಾಡುತ್ತದೆ. ವಾಟ್ಸ್ಆ್ಯಪ್ ಬಳಕೆ ಇಲ್ಲದೆ ಸಾಧ್ಯವೇ ಇಲ್ಲ ಎಂಬುವಷ್ಟರಮಟ್ಟಿಗೆ ಅದು ನಮ್ಮ ಮೇಲೆ ಪ್ರಭಾವ ಬೀರಿದೆ. ಆದರೆ,ನಾವು ಈ ಆ್ಯಪ್ ನಲ್ಲಿ ಜಾಹಿರಾತು ಕಾಣಲ್ಲ….! ಹಾಗಾದ್ರೆ ವಾಟ್ಸಪ್ ಗೆ ದುಡ್ಡು ಹೇಗೆ ಬರುತ್ತೆ? ಆರಂಭದಲ್ಲಿ ವಾರ್ಷಿಕ ಶುಲ್ಕ ಪಾವತಿ ವಿಧಾನವಿತ್ತು. ಆದರೆ , ಫೇಸ್ ಬುಕ್ ಖರೀದಿ ಮಾಡಿದ ಬಳಿಕ ಅದೂ ಸಹ ಇಲ್ಲ…!ವಾಟ್ಸ್ಆ್ಯಪ್ ಅನ್ನು ಫೇಸ್ ಬುಕ್ ಕೊಂಡಿದ್ದು19 ಬಿಲಿಯನ್ ಡಾಲರ್ ಗೆ. ಇಷ್ಟೊಂದು ದೊಡ್ಡಮೊತ್ತಕ್ಕೆ ಕೊಂಡಿದೆ ಅಂದ್ರೆContinue reading “ವಾಟ್ಸ್ ಆ್ಯಪ್ ಹೇಗೆ ದುಡ್ಡು ಮಾಡುತ್ತೆ ಅಂತ ನಿಮ್ಗೆ ಗೊತ್ತಾ?”
ಮಾರಕ ‘ಕೊರೊನಾ’ ಸೋಂಕಿಗೆ ‘TV-5’ ಪತ್ರಕರ್ತ ಸಾವು
ಕಿಲ್ಲರ್ ಕೊರೊನಾ ಸೋಂಕಿಗೆ ತೆಲುಗಿನ ಸುದ್ದಿವಾಹಿನಿ ಟಿವಿ 5 ಪತ್ರಕರ್ತ ದಾರುಣವಾಗಿ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ಇಂದು ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆ ಪತ್ರಕರ್ತ ಮನೋಜ್ ಕುಮಾರ್ ಅವರನ್ನು ಹೈದರಾಬಾದ್ ನ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ನಿನ್ನೆಯಷ್ಟೇ ಅವರ ಸ್ವಾಬ್ ಮಾದರಿಯ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು, ಒಂದೇ ದಿನದ ಅಂತರದಲ್ಲಿ ಮನೋಜ್ ಕುಮಾರ್ ಬಲಿಯಾಗಿದ್ದಾರೆ. ಇವರು ಬೆಲ್ಯಾಟರಲ್ ನ್ಯುಮೋನಿಯಾ ಮತ್ತು ಕೋವಿಡ್ 19 ನಿಂದ ಸಾವನ್ನಪ್ಪಿದ್ದಾರೆ ಎಂದು ಹೈದರಾಬಾದ್Continue reading “ಮಾರಕ ‘ಕೊರೊನಾ’ ಸೋಂಕಿಗೆ ‘TV-5’ ಪತ್ರಕರ್ತ ಸಾವು”
ಜೂ. 8ರಿಂದ ರಾಜ್ಯದ ಎಲ್ಲಾ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು ➤ ಸಚಿವ ಸುರೇಶ್ ಕುಮಾರ್
ರಾಜ್ಯದ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಶಿಕ್ಷಕರು ಜೂ.8 ರಿಂದ ಶಾಲಾ ಕಛೇರಿಯಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ. ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಜೂ.8ರಂದು ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದ್ದು, ಹಾಗೆಯೇ ರಾಜ್ಯಾದ್ಯಂತ ದೂರದ ಊರುಗಳಿಂದ ಬರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರು ಜೂನ್ 8ರಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಲು ಆದೇಶ ನೀಡಲಾಗಿದೆ.
ಜೂನ್ 07: ಇಂದು ಸಿಟಿಬಸ್ ಸಂಚಾರ ಸ್ಥಗಿತ
ಜನ ಸಂಚಾರ ವಿರಳ ಹಿನ್ನೆಲೆ ಉಡುಪಿ: ನಗರದಲ್ಲಿ ಜನ ಸಂಚಾರ ವಿರಳ ಹಿನ್ನೆಲೆಯಲ್ಲಿ ಜೂನ್ 7 ರಂದು ಸಿಟಿಬಸ್ ಸಂಚಾರ ಸ್ಥಗಿತಕ್ಕೆ ಬಸ್ ಮಾಲಕರು ನಿರ್ಧರಿಸಿದ್ದಾರೆ. ಕಳೆದ ಭಾನುವಾರವೂ ಸಿಟಿಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು, ಆದ್ದರಿಂದ ಇಂದು( ಜೂನ್ 7 ರಂದು) ನಗರದಲ್ಲಿ ಸಂಚರಿಸುವ 23 ಬಸ್ಗಳು ರಸ್ತೆಗೆ ಇಳಿಯುದಿಲ್ಲ ಎಂದು ಬಸ್ ಮಾಲಕರ ಸಂಘದ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಸಿಟಿ ಬಸ್ ಶೇ.15 ರಷ್ಟು ಟಿಕೆಟ್ ದರ ಏರಿಸಿ ನಗರದಲ್ಲಿContinue reading “ಜೂನ್ 07: ಇಂದು ಸಿಟಿಬಸ್ ಸಂಚಾರ ಸ್ಥಗಿತ”
ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ ….
ತಿರುಚ್ಚಿಯ ಶ್ರೀರಂಗನಾಥ ದೇವಸ್ಥಾನ , ಅಲ್ಲಿ ಬೆಳಗಿನ ಪೂಜೆ ಆದ ಬಳಿಕ ದೇವರಿಗೆ ಸಮರ್ಪಣೆ ಮಾಡಿದ ಪ್ರಸಾದವನ್ನು ನೆರೆದ ಭಕ್ತರಿಗೆ ಹಂಚುವುದು ವಾಡಿಕೆ .ಹಾಗೆ ಅದನ್ನು ಸ್ವಕರಿಸಲು ಭಕ್ತರೆಲ್ಲರೂ ಸರದಿಯ ಸಾಲಿನಲ್ಲಿ ಬಂದು ಭಕ್ತಿಯಿಂದ ಸ್ವೀಕರಿಸುತ್ತಿದ್ದಾಗ ಕಡು ಬಡವ ಹಿರಿಯರೊಬ್ಬರು ಸರದಿಯ ಸಾಲಿನಲ್ಲಿ ನಿಲ್ಲದೆ ಎಲ್ಲರನ್ನು ದೂಡಿ ಮುಂದೆಹೋಗಿ ನಿಲ್ಲುತ್ತಿದ್ದರು ಅಲ್ಲದೆ ಕೈಯಲ್ಲಿ ದೊಡ್ಡದೊಂದು ಪಾತ್ರೆಯನ್ನು ಹಿಡಿದು ಪ್ರಸಾದವನ್ನು ಕೇಳುತ್ತಿದ್ದರು. ನಾನು ಬಡವ ನನಗೆ 6 ಜನ ಮಕ್ಕಳಿದ್ದಾರೆ , ಇದು ಸಿಗದಿದ್ದರೆ ಅವರೆಲ್ಲ ನಿರಾಹಾರರಾಗ ಬೇಕಾಗುತ್ತದೆContinue reading “ಶ್ರೀ ವಿಷ್ಣು ಸಹಸ್ರನಾಮ ಮತ್ತು ಅದರ ಮಹತ್ವದ ಬಗ್ಗೆ ಹಿರಿಯರೊಬ್ಬರಿಂದ ಕೇಳಿ ತಿಳಿದ ವಿಚಾರ ….”
ಜೂನ್ 07,2020 ಭಾನುವಾರ ಇಂದಿನ ರಾಶಿ ಫಲ
ಮೇಷ ಮನೆಯಲ್ಲಿ ಅತ್ಯಂತ ಗಡಿಬಿಡಿಯ ದಿನವಾಗುವ ಸಾಧ್ಯತೆ. ತಾಳ್ಮೆ ಕಳೆದುಕೊಳ್ಳದಿರುವುದು ಒಳಿತು. ಮಕ್ಕಳ ವಿಚಾರದಲ್ಲಿ ಅತ್ಯಂತ ವಿವೇಕಯುತವಾಗಿ ವ್ಯವಹರಿಸಿದಲ್ಲಿ ಹಿರಿತನಕ್ಕೊಂದು ಗೌರವ ಪಡೆಯುವಿರಿ. ವೃಷಭ ನಿಮ್ಮ ಬೇಜವಾಬ್ದಾರಿತನದಿಂದಾಗಿ ವ್ಯವಹಾರದಲ್ಲಿ ಕುಂಠಿತವಾಗುವ ಸಾಧ್ಯತೆ. ಆದಾಯದಲ್ಲಿಯೂ ಸ್ವಲ್ಪಮಟ್ಟಿನ ಹಿನ್ನಡೆ. ವಾಹನ ವ್ಯವಹಾರದಲ್ಲಿರುವವರಿಗೆ ಆದಾಯದಲ್ಲಿ ಚೇತರಿಕೆಯಾಗಲಿದೆ. ಮಿಥುನ ನಿಮ್ಮ ಕಾರ್ಯದಕ್ಷತೆಯಿಂದಾಗಿ ಮೇಲಧಿಕಾರಿಗಳ ಪ್ರಶಂಸೆಗೆ ಪಾತ್ರರಾಗುವಿರಿ. ಹೆಚ್ಚಿನ ಜವಾಬ್ದಾರಿಯನ್ನು ಹೊರಬೇಕಾದ ಅನಿವಾರ್ಯತೆ ಕಂಡುಬರುತ್ತಿದೆ. ಒಟ್ಟಾರೆ ಸಂತಸದ ದಿನವಾಗಿಲಿದೆ. ಕಟಕ ಬಹುದಿನಗಳ ಕನಸಿನ ಯೋಜನೆಯೊಂದು ಸುಲಭವಾಗಿ ಕೈಗೂಡುವ ಸಾಧ್ಯತೆ ಕಂಡುಬರುತ್ತಿದೆ. ಅನಿರೀಕ್ಷಿತ ದೂರ ಪ್ರಯಾಣದContinue reading “ಜೂನ್ 07,2020 ಭಾನುವಾರ ಇಂದಿನ ರಾಶಿ ಫಲ”