ಜೂ.14ರ ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ಸರಕಾರ

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಿ ಮೂರು ನಾಲ್ಕು ತಿಂಗಳೇ ಕಳೆಯುತ್ತಿದೆ. ಕೊರೋನಾ ಸೋಂಕಿನ ಭೀತಿಯಿಂದ ಲಾಕ್ ಡೌನ್ ಘೋಷಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೆ ಸಾದ್ಯವಾಗಿರಲಿಲ್ಲ. ಹೀಗಾಗಿ ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಲು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಕೋರಿಕೊಂಡಿದ್ದರು. ಇದೀಗ ಡಿಕೆ ಶಿವಕುಮಾರ್ ಪತ್ರಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ.

ಜೂನ್ 14ರಂದು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಲು ಅವಕಾಶ ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಪತ್ರ ಬರೆದು ಕೋರಿಕೊಂಡಿದ್ದರು. ಆದ್ರೇ ರಾಜ್ಯ ಸರ್ಕಾರ ಇದೀಗ ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುವಂತ ಕಾರ್ಯಕ್ರಮಕ್ಕೆ ಅನುಮತಿಯನ್ನು ನಿರಾಕರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡುವುದಕ್ಕೆ ಬ್ರೇಕ್ ಹಾಕಿದೆ.ಈ ಹಿಂದೆ ಜೂನ್ 08ರಂದು ನಡೆಸಲು ಅನುಮತಿ ಕೇಳಿದಾಗಲೂ ಸರಕಾರ ಅನುಮತಿ ನೀಡಲು ನಿರಾಕರಿಸಿತ್ತು.

Leave a comment

Design a site like this with WordPress.com
Get started