Design a site like this with WordPress.com
Get started

ಸೌಂದರ್ಯವರ್ಧಕ ಸೋರೆಕಾಯಿ…!

ಸೋರೆಕಾಯಿ ರಸ ದೇಹಕ್ಕೆ ಮಾತ್ರವಲ್ಲ ಕೂದಲಿಗೂ ಒಳ್ಳೆಯದು. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ದೇಹತೂಕ ಇಳಿಯುತ್ತದೆ. ಚರ್ಮದ ಮೇಲೆ ಮೂಡುವ ಸುಕ್ಕು, ನೆರಿಗೆಗಳು ದೂರವಾಗುತ್ತವೆ. ಇದರಲ್ಲಿ ಸತು ಮತ್ತು ವಿಟಮಿನ್ ಸಿ ಇದ್ದು ಇದು ಅಕಾಲಿಕ ವಯಸ್ಸಿನ ಸಮಸ್ಯೆಗಳನ್ನು ತಡೆಯುತ್ತದೆ. ಇದರ ರಸವನ್ನು ಮುಖ ಹಾಗೂ ಕುತ್ತಿಗೆಗೆ ಹಚ್ಚಬೇಕು. ಬೆಳಿಗ್ಗೆ ಎದ್ದಾಕ್ಷಣ ಕಣ್ಣು ಉಬ್ಬಿರುವವರು ಇದರ ರಸವನ್ನು ಪ್ರಯತ್ನಿಸಿ. ಇದು ಊತವನ್ನು ನಿವಾರಿಸುತ್ತದೆ. ತಾಜಾ ಸೋರೆಕಾಯಿಯ ಎರಡು ಹೋಳುಗಳನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟು 15 ನಿಮಿಷContinue reading “ಸೌಂದರ್ಯವರ್ಧಕ ಸೋರೆಕಾಯಿ…!”

ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೋನಾಗೆ ಮೂವರು ಬಲಿ : ಸಾವಿನ ಸಂಖ್ಯೆ 72ಕ್ಕೆ ಏರಿಕೆ

 ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಸರಣಿ ಮುಂದುವರೆದಿದೆ. ರಾಜ್ಯದಲ್ಲಿ ಇಂದು 204 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ. ಇವರಲ್ಲಿ 2976 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರೀಯವಾಗಿರುವ ಕೊರೋನಾ ಸೋಂಕಿತರ ಸಂಖ್ಯೆ 3195 ಆಗಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಇಬ್ಬರು, ರಾಯಚೂರಿನಲ್ಲಿ ಒಬ್ಬರು ಕೊರೋನಾಗೆ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 72ಕ್ಕೆ ಏರಿಕೆಯಾಗಿದೆ. ಈ ಕುರಿತಂತೆContinue reading “ರಾಜ್ಯದಲ್ಲಿ ಇಂದು ಕಿಲ್ಲರ್ ಕೊರೋನಾಗೆ ಮೂವರು ಬಲಿ : ಸಾವಿನ ಸಂಖ್ಯೆ 72ಕ್ಕೆ ಏರಿಕೆ”

ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್

ಉಡುಪಿ ಜೂನ್ 11 : ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಬಸ್ ಗಳಲ್ಲಿ ನಿಗಧಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ ಗಳ ವಿರುದ್ದ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾದಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ. ಅವರು ಗುರುವಾರ , ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಖಾಸಗಿ ಬಸ್ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರೋನಾ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಅವಶ್ಯಕವಾಗಿದ್ದು, ಬಸ್ ಗಳಲ್ಲಿContinue reading “ಬಸ್ ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಎಪಿಡಮಿಕ್ ಕಾಯಿದೆ ಪ್ರಕಾರ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್”

ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ನಿಲ್ಲಿಸಬೇಕೆಂದು ಆದೇಶ ನೀಡಿದ್ದಾರೆ. ಚಿಕ್ಕಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾನಸಿಕ ಒತ್ತಡ ಹೇರುತ್ತದೆ. ಇದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹಲವು ತಜ್ಞರೇ ವರದಿ ನೀಡಿದ್ದರು. ಪೋಷಕರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಈ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಇಂದಿನಿಂದಲೇ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಆದೇಶContinue reading “ಆನ್ ಲೈನ್ ಶಿಕ್ಷಣ ರದ್ದುಗೊಳಿಸಲು ಆದೇಶ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್”

ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?

ದುಡ್ಡು ಮಾಡಲು ನಿಂತು ಬಿಟ್ರಾ ಕೊರೋನಾ ವಾರಿಯರ್ಸ್‌!!? ನಿಜಕ್ಕೂ ಇದು ಅಚ್ಚರಿ ಮೂಡಿಸುವ ವಿಚಾರ. KOVID 19 ಇಡೀ ಜಗತ್ತನ್ನೇ ಹಿಂಡಿ ಹಿಪ್ಪೆ ಮಾಡಿದೆ. ಜನತೆಯ ಬದುಕು ನಲುಗಿ ಹೋಗಿದೆ. ಜೀವನವೇ ಸಾಕಾಗಿಬಿಟ್ಟಿದೆ. ಸಾವು ಕಣ್ಣೆದುರಲ್ಲೇ ಇದೆ. ಆದರೂ ಜನರು ಬದಲಾಗಲಿಲ್ಲ!! ಕಟ್ಟುನಿಟ್ಟಾಗಿ ನಿಯಮ ಪಾಲಿಸಬೇಕಾಗಿಬಂದಾಗ ಒಲ್ಲದ ಮನಸ್ಸಿನಿಂದಲೋ, ಸಾವಿನ ಭಯದಿಂದಲೋ ಒಗ್ಗಿಕೊಂಡರು ಒಂದಷ್ಟು ಅನಿಷ್ಟ ಮಂದಿಯ ಹೊರತಾಗಿ!? ಜನರ ಹಿತದೃಷ್ಟಿಯಿಂದ, ಆರ್ಥಿಕ ಚೇತರಿಕೆಗಾಗಿ ಹಂತಹಂತವಾಗಿ ಕಠಿಣ ಹಾಗೂ ಕಡ್ಡಾಯ ನೀತಿಗಳನ್ನು ಸಡಿಲಗೊಳಿಸುತ್ತಾ ಬಂದಂತೆಲ್ಲ ಜನತೆ ತಮ್ಮContinue reading “ದುಡ್ಡು ಮಾಡಲು ನಿಂತು ಬಿಟ್ಟ್ರಾ ಕೊರೋನಾ ವಾರಿಯರ್ಸ್!!!?”

ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು,Continue reading “ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್”

ಔಷಧೀಯ ಗುಣದ ಆಗರ ದೊಡ್ಡಪತ್ರೆ

ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಕೂಡಾ ಬೆಳೆಸುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ. ಇದು ಹಿಂದೆ ಕಾಲರಾದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು. ಇವತ್ತಿಗೂ ದೊಡ್ಡಪತ್ರೆ ಹೆಚ್ಚಿನ ಮನೆಗಳಲ್ಲಿ ಕಂಡು ಬರುತ್ತದೆ. ಇದನ್ನು ಸಾಂಬಾರ ಬಳ್ಳಿ, ಸಾವಿರ ಸಾಂಬಾರ(ಅಜವನದ ಎಲೆ), ಕರ್ಪೂರವಳ್ಳಿ ಹೀಗೆ ಹಲವಾರು ಹೆಸರುಗಳಿಂದ ಕರೆಯುತ್ತಾರೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂವಿನ ಕುಂಡದಲ್ಲಿಯೂContinue reading “ಔಷಧೀಯ ಗುಣದ ಆಗರ ದೊಡ್ಡಪತ್ರೆ”

ಜೂನ್ 11, 2020: ಗುರುವಾರ : ಇಂದಿನ ರಾಶಿ ಭವಿಷ್ಯ

ಮೇಷ ನೀವು ನಿಮ್ಮ ಸ್ನೇಹಿತರಿಂದಲೂ ಬೆಂಬಲವನ್ನು ಪಡೆಯುತ್ತೀರಿ. ಇದು ನಿಮ್ಮನ್ನು ಮುಂದುವರಿಯಲು ಪ್ರೇರೇಪಿಸುತ್ತದೆ. ವೃಷಭ ಬಹಳಷ್ಟು ಅನುಕೂಲಕರವಾಗಲಿದೆ. ಮತ್ತು ಹಣದ ಗಳಿಕೆಯ ಮೂಲಗಳು ನಿರಂತರವಾಗಿರುತ್ತವೆ. ಇದರಿಂದ ನೀವು ಸಂತೋಷವಾಗಿರುತ್ತೀರಿ ಕರ್ಕಾಟಕ ವೃತ್ತಿಪರ ಜೀವನದಲ್ಲಿ ಬದಲಾವಣೆಗಳು ಬರುತ್ತವೆ. ಬಹುಶಃ ಸ್ಥಳಾಂತರವು ಇರಬಹುದು. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಜನರಿಗೆ ಈ ವರ್ಷ ಸಾಧನೆಗಳಿಂದ ತುಂಬಿರಬಹುದು. ಮಿಥುನ ನೀವು ತುಂಬಾ ಅದೃಷ್ಟಶಾಲಿಯಾಗುತ್ತೀರಿ ಮತ್ತು ಉತ್ತಮ ಆರೋಗ್ಯವನ್ನು ಆನಂದಿಸುವಿರಿ. ನಿಮ್ಮ ದಿನಚರಿಯನ್ನು ನೀವು ನಿಯಮಿತವಾಗಿ ಇಟ್ಟುಕೊಳ್ಳಬೇಕು. ಸಿಂಹ ಪ್ರೀತಿಯ ಜೀವನವು ಇನ್ನಷ್ಟುContinue reading “ಜೂನ್ 11, 2020: ಗುರುವಾರ : ಇಂದಿನ ರಾಶಿ ಭವಿಷ್ಯ”