ಇಂದಿನಿಂದ ರಾಜ್ಯದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮುಂಗಾರು ಮಳೆ ಇಂದಿನಿಂದ ಚುರುಕಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ. 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ ಶಿವಮೊಗ್ಗದಲ್ಲಿ ಜೂ. 13 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.null

ಇನ್ನು ಬುಧವಾರ ದಕ್ಷಿಣ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಿದೆ.

Leave a comment

Design a site like this with WordPress.com
Get started