
ಕೋವಿಡ್-19 ಸೋಂಕು ನಿಯಂತ್ರಿಸಲು ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಈ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಮುಖಗವಸು(ಮಾಸ್ಕ್) ಧರಿಸುವುದು, ಸೋಪಿನಿಂದ ಕೈ ತೊಳೆಯುವುದು, ಸ್ಯಾನಿಟೈಸರ್ ಬಳಕೆ ಮತ್ತು ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಅತೀ ಮುಖ್ಯವಾದ ವೈದ್ಯಕಿಯೇತರ ಪಾಲನೆಯಾಗಿದೆ ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ತಿಳಿಸಿದ್ದಾರೆ.
ಈ ಕುರಿತು ಜನ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ರಾಜ್ಯ ಸರಕಾರವು ಜೂ.18ರಂದು ‘ಮಾಸ್ಕ್ ದಿನ’ವನ್ನಾಗಿ ಘೋಷಿಸಲು ನಿರ್ಧರಿಸಿದೆ. ಈ ದಿನ ಜಿಲ್ಲಾ ಮತ್ತು ತಾಲೂಕು ಆಡಳಿತವು ಚುನಾಯಿತ ಪ್ರತಿನಿಧಿಗಳು, ಗಣ್ಯವಕ್ತಿಗಳು, ವೈದ್ಯಕೀಯ ಸಿಬ್ಬಂದಿಗಳನ್ನು ಭಾಗವಹಿಸಿಕೊಂಡು ಪಾದಯಾತ್ರೆಯ ಮೂಲಕ ಜಾಗೃತಿ ಮೂಡಿಸುವಂತೆ ಅವರು ಆದೇಶ ಹೊರಡಿಸಿದ್ದಾರೆ.