ರಾಜ್ಯದಲ್ಲಿಂದು ಕೊರೋನಾ ಸೋಂಕಿನ ಮ್ಯಾರಥಾನ್:9000ದ ಗಡಿ ದಾಟಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಂದು ಒಂದೇ ದಿನ  ಮತ್ತೆ 453 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 9,150ಕ್ಕೆ ಏರಿಕೆಯಾಗಿದೆ. 

ಬೆಂಗಳೂರು ನಗರ ಜಿಲ್ಲೆಯಲ್ಲಿ ಮೂರು ಮತ್ತು ಬೀದರ್ ನಲ್ಲಿ ಎರಡು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 137ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.null

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆವರೆಗೆ ಐದು ಸಾವು, 453 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಮೂರು ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ 62 ವರ್ಷದ ಪುರುಷ, 55 ವರ್ಷದ ಪುರುಷ ಮತ್ತು 53 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೀದರ್ ಜಿಲ್ಲೆಯಲ್ಲಿ 70 ಮತ್ತು 46 ವರ್ಷದ ಪುರುಷರಿಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 7, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ, ಚಿಕ್ಕಬಳ್ಳಾಪುರ ಮತ್ತು ಹಾವೇರಿಯಲ್ಲಿ ತಲಾ 3, ರಾಮನಗರ, ಶಿವಮೊಗ್ಗ ಮತ್ತು ರಾಮನಗರದಲ್ಲಿ ತಲಾ 2, ಚಿಕ್ಕಮಗಳೂರಿನಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 9,150 ಕೊರೋನ ಸೋಂಕಿತರ ಪೈಕಿ 5,618 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 225 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 137 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 3,391 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Leave a comment

Design a site like this with WordPress.com
Get started