
ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದೃತು, ಕಾರ್ತಿಕಮಾಸ,
ಕೃಷ್ಣಪಕ್ಷ, ದಶಮಿ ಏಕಾದಶಿ,
ಗುರುವಾರ,
ಹಸ್ತ ನಕ್ಷತ್ರ / ಚಿತ್ತಾ ನಕ್ಷತ್ರ,
ರಾಹುಕಾಲ : 01:42 ರಿಂದ 03:08
ಗುಳಿಕಕಾಲ : 09:24 ರಿಂದ 10:50
ಯಮಗಂಡಕಾಲ : 6:33 ರಿಂದ 07:58
ಮೇಷ
ಅಲಂಕಾರಿಕ ವಸ್ತುಗಳನ್ನು ಖರೀದಿಸಲಿದ್ದೀರಿ. ಸರಳ ವಿವಾಹದ ನಿಶ್ಚಯದಿಂದಾಗಿ ಮನೆಯಲ್ಲಿ ಸಂತಸ. ಮಹಿಳೆಯರಿಗೆ ಸಂಗಾತಿಯಿಂದ ವಿಶೇಷ ಉಡುಗೊರೆ ದೊರೆಯಲಿದೆ. ಮನೆಯಲ್ಲಿ ಹಬ್ಬದ ವಾತಾವರಣ ಮೂಡಲಿದೆ.
ವೃಷಭ
ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಶ್ರಮವಹಿಸಿ ಮಾಡಿದ ಉತ್ತಮ ಸಾಧನೆಯ ಸಂತಸವನ್ನು ಮನೆಯವರೊಂದಿಗೆ ಹಂಚಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಪದೋನ್ನತಿಯಿಂದಾಗಿ ಉತ್ತಮ ಆದಾಯ.
ಮಿಥುನ
ಸ್ನೇಹಿತರು ಮತ್ತು ಬಂಧುಗಳೊಂದಿಗಿನ ಸಂಬಂಧಗಳು ಗಟ್ಟಿಗೊಳ್ಳುವ ಸಾಧ್ಯತೆ. ಮನೆಯ ಜವಾಬ್ದಾರಿಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಸಲ್ಲದು. ಮನೆಯವರ ಮನ ಮೆಚ್ಚಿಸಲು ಅನ್ಯ ಮಾರ್ಗ ಸರಿಯಾಗಲಾರದು.
ಕಟಕ
ವೃತ್ತಿ ನೈಪುಣ್ಯತೆಯಿಂದಾಗಿ ನೌಕರಸ್ಥರಿಗೆ ವಿಶೇಷ ಸ್ಥಾನಮಾನ ದೊರಕಲಿದೆ. ಪದೋನ್ನತಿಯಿಂದಾಗಿ ಆರ್ಥಿಕ ಸುಧಾರಣೆ. ಚಿನ್ನಾಭರಣ ಖರೀದಿ ಸಾಧ್ಯತೆ. ಮನೆಗೆ ಹೊಸ ಸದಸ್ಯರ ಸೇರ್ಪಡೆಯ ಸಂಭ್ರಮ.
ಸಿಂಹ
ಅನಗತ್ಯ ಮಾತು ಕತೆ, ಚರ್ಚೆಗಳಲ್ಲಿ ಭಾಗವಹಿಸದಿರುವುದೇ ಉತ್ತಮ. ವಕೀಲ ವೃತ್ತಿಯಲ್ಲಿರುವವರಿಗೆ ಬಿಡುವಿನ ದಿನ. ಪ್ರಯಾಣ ಪ್ರವಾಸಗಳಿಗೆ ಶುಭದಿನವಾಗಲಿದೆ. ಚಿನ್ನಾಭರಣ ವ್ಯಾಪಾರಿಗಳಿಗೆ ವಿಶೇಷ ಲಾಭ.
ಕನ್ಯಾ
ವೃತ್ತಿ ಜೀವನದಲ್ಲಿ ಬದಲಾವಣೆ ಸಾಧ್ಯತೆ. ಆದಾಯದಲ್ಲಿ ಹೆಚ್ಚಳದ ನಿರೀಕ್ಷೆ. ಶಿಕ್ಷಣ ಕ್ಷೇತ್ರದಲ್ಲಿರುವವರ ಸೇವೆಯನ್ನು ಗಮನಿಸಿ ಸಾಮಾಜಿಕ ಗೌರವ ಪ್ರಾಪ್ತವಾಗಲಿದೆ. ಸಂಗಾತಿಯ ಮಾತಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ.
ತುಲಾ
ನಿಮ್ಮ ರಾಜಕೀಯ ವಿಷಯದಲ್ಲಿ ಬದಲಾವಣೆ ಕಾಣಲಿದ್ದೀರಿ. ನಿಮ್ಮ ಪ್ರಭಾವದಿಂದಾಗಿ ನೆರೆಹೊರೆಯವರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ.
ವೃಶ್ಚಿಕ
ಬಂಧುಗಳ ಮನೆಯಲ್ಲಿ ಸಂಜೆಯವರೆಗೂ ವಿಶೇಷ ಸಮಾರಂಭಗಳಲ್ಲಿ ಸಾಧ್ಯತೆ. ಮನೆಯವರ ವಿಷಯದಲ್ಲಿ ಉದಾಸೀನ ಸಲ್ಲದು. ವ್ಯವಹಾರಗಳು ಎಂದಿನಂತೆ ನಡೆಯಲಿವೆ.
ಧನು
ಆಭರಣ ತಯಾರಿಕೆ, ಗೃಹಾಲಂಕಾರ ಸಾಮಗ್ರಿ ಮುಂತಾದ ಕರಕುಶಲ ವೃತ್ತಿಗಳಲ್ಲಿ ತೊಡಗಿದವರಿಗೆ ಹೆಚ್ಚಿನ ವರಮಾನ. ನೆನೆಗುದಿಗೆ ಬಿದ್ದಿರುವ ನಿರ್ಮಾಣ ಕೆಲಸಗಳು ಪೂರ್ಣಗೊಳ್ಳಲು ಚುರುಕು ಪಡೆದುಕೊಳ್ಳುವವು.
ಮಕರ
ಮುಂದಾಲೋಚನೆಯಿಂದ ಮುಂಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಮಾಜಕಲ್ಯಾಣ ಕಾರ್ಯಕ್ಕಾಗಿ ನಿಮ್ಮ ಸಲಹೆ ಸಹಕಾರಗಳನ್ನು ನೀಡಬೇಕಾದ ಅನಿವಾರ್ಯತೆ ಉಂಟಾಗಬಹುದು.
ಕುಂಭ
ಕೆಲಸ–ಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ನಿಮ್ಮ ಜವಾಬ್ದಾರಿಗಳನ್ನು ಬೇರೆಯವರಿಗೆ ವರ್ಗಾಯಿಸುವುದರಿಂದ ನೆಮ್ಮದಿ. ಮನೆಯ ಜವಾಬ್ದಾರಿಯನ್ನು ಯೋಗ್ಯ ರೀತಿಯಲ್ಲಿ ನಿಭಾಯಿಸಿ ಪ್ರಶಂಸೆಗೆ ಪಾತ್ರರಾಗುವಿರಿ.
ಮೀನ
ಸಲಹೆಗಾರರಾಗಿ ಸೇವೆ ಸಲ್ಲಿಸುವ ಅವಕಾಶ ನಿಮ್ಮದಾಗಲಿದೆ. ಗುಪ್ತ ಆಸ್ತಿ ಖರೀದಿಯ ಸಾಧ್ಯತೆ. ತುರ್ತು ವಿಷಯಗಳ ಬಗ್ಗೆ ಗಮನ ಹರಿಸುವಿರಿ. ದೂರದಲ್ಲಿರುವ ಗೆಳೆಯರೊಂದಿಗೆ ವಿಚಾರ ವಿನಿಮಯ ನಡೆಸಲಿದ್ದೀರಿ.