
ಉಡುಪಿ, ಡಿ.12 : ಇಲ್ಲಿನ ವಿದ್ಯೋದಯ ಪಬ್ಲಿಕ್ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅನಾಮಯ ಯೋಗೇಶ್ ದಿವಾಕರ್ ಕೌನ್ ಬನೇಗಾ ಕರೋಡ್ಪತಿಯ ವಿಶೇಷ ಸಂಚಿಕೆಯಲ್ಲಿ ಭಾಗವಹಿಸುವ ಅವಕಾಶ ಪಡೆದಿದ್ದಾರೆ.
ಕೆಬಿಸಿಯ ಸ್ಟುಡೆಂಟ್ ಸ್ಪೆಷಲ್ ಸಪ್ತಾಹಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ವೇದಾಂತ ಆನ್ಲೈನ್ ಲರ್ನಿಂಗ್ ಆಪ್ ಅ.5 ರಿಂದ 25ರವರೆಗೆ ಕ್ವಿಝ್ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು.
ಈ ಕ್ವಿಝ್ನಲ್ಲಿ ದೇಶದಾದ್ಯಂತ ಸುಮಾರು 1.5 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪೈಕಿ ಎಂಟು ಮಂದಿ ಫೈನಲಿಸ್ಟ್ ವಿದ್ಯಾರ್ಥಿಗಳಲ್ಲಿ ಉಡುಪಿಯ ಅನಾಮಯ ಯೋಗೇಶ್ ದಿವಾಕರ್ ಕೂಡಾ ಒಬ್ಬರು.