Design a site like this with WordPress.com
Get started

ರೂಪಾಂತರಿತ ಕೊರೋನಾ ಎಫೆಕ್ಟ್: ನಾಳೆಯಿಂದ ರಾತ್ರಿ ಪ್ರತಿಬಂಧಕಾಜ್ಞೆ ಜಾರಿ

ಬೆಂಗಳೂರು: ಬ್ರಿಟನ್ ಮೂಲದಿಂದ ಮತ್ತೆ ವೈರಸ್ ಹರಡುವ ಬೀತಿಯಿಂದ ದೇಶದ ಕೆಲವು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೂ ನೈಟ್ ಕರ್ಫ್ಯೂ ಮಾಡಲು ಮುಂದಾಗಿದ್ದು ಈ ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ರಾತ್ರಿ 11ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ಮಾಡಲು ಸರಕಾರ ತೀರ್ಮಾನ ಮಾಡಿದ್ದು ಈ ನೀತಿಯು ಕೇವಲ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಹಗಲಲ್ಲಿ ಬಹಳಷ್ಟು ಜನಸಂಚಾರ ಇರುವುದರಿಂದ ಈ ವ್ಯವಸ್ಥೆಯು ದಾರಿContinue reading “ರೂಪಾಂತರಿತ ಕೊರೋನಾ ಎಫೆಕ್ಟ್: ನಾಳೆಯಿಂದ ರಾತ್ರಿ ಪ್ರತಿಬಂಧಕಾಜ್ಞೆ ಜಾರಿ”

ಕೋವಿಡ್19 ‘ತಾಂತ್ರಿಕ ಸಲಹಾ ಸಮಿತಿ’ ಸಭೆ ಮುಕ್ತಾಯ : ರಾಜ್ಯದಲ್ಲಿ ಮತ್ತೆ ‘ರಾತ್ರಿ ಕರ್ಫ್ಯೂ’ ಜಾರಿಯಾಗಲಿದೆಯೇ?

ಬೆಂಗಳೂರು : ಯುಕೆ ಕೋವಿಡ್ ರೂಪಾಂತರ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಕೈಗೊಳ್ಳಬಹುದಾದಂತ ಕ್ರಮಗಳ ಕುರಿತಂತೆ, ಇಂದು ವೈದ್ಯಕೀಯ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಿತು. ಇಂತಹ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಕ್ಕೆ ಬರಲಾಗಿದ್ದು, ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿರುವಂತ ಸಚಿವರು, ತಾಂತ್ರಿಕ ಸಲಹಾ ಸಮಿತಿಯ ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಹೀಗಾಗಿ ಮತ್ತೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯಾಗುತ್ತಾ ಎಂಬ ಬಗ್ಗೆಯೂ ಕುತೂಹಲ ಮೂಡಿಸಿದೆ.Continue reading “ಕೋವಿಡ್19 ‘ತಾಂತ್ರಿಕ ಸಲಹಾ ಸಮಿತಿ’ ಸಭೆ ಮುಕ್ತಾಯ : ರಾಜ್ಯದಲ್ಲಿ ಮತ್ತೆ ‘ರಾತ್ರಿ ಕರ್ಫ್ಯೂ’ ಜಾರಿಯಾಗಲಿದೆಯೇ?”

ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನಿಷೇಧಿಸಿದ ರಾಜ್ಯಸರಕಾರ!

ಬೆಂಗಳೂರು: ಕೋವಿಡ್‌-19ರ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರೋಗ ಲಕ್ಷಣ ರಹಿತರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೋವಿಡ್‌-19ರ ಎರಡನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಮಾರುಕಟ್ಟೆ ಮತ್ತು ಅಂಗಡಿ ಮಳಿಗೆಗಳ ನಿರ್ವಹಣೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗರಿಷ್ಠContinue reading “ಜ್ವರ, ಶೀತ, ಕೆಮ್ಮು, ಗಂಟಲು ಕೆರೆತ ಮತ್ತು ಉಸಿರಾಟದ ಸಮಸ್ಯೆಗಳಿರುವ ವ್ಯಕ್ತಿಗಳು ಮಾರುಕಟ್ಟೆ, ಅಂಗಡಿ, ಮಳಿಗೆಗಳಿಗೆ ಭೇಟಿ ನಿಷೇಧಿಸಿದ ರಾಜ್ಯಸರಕಾರ!”