ರೂಪಾಂತರಿತ ಕೊರೋನಾ ಎಫೆಕ್ಟ್: ನಾಳೆಯಿಂದ ರಾತ್ರಿ ಪ್ರತಿಬಂಧಕಾಜ್ಞೆ ಜಾರಿ

ಬೆಂಗಳೂರು: ಬ್ರಿಟನ್ ಮೂಲದಿಂದ ಮತ್ತೆ ವೈರಸ್ ಹರಡುವ ಬೀತಿಯಿಂದ ದೇಶದ ಕೆಲವು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ರಾಜ್ಯದಲ್ಲೂ ನೈಟ್ ಕರ್ಫ್ಯೂ ಮಾಡಲು ಮುಂದಾಗಿದ್ದು ಈ ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ.

ರಾತ್ರಿ 11ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಫ್ಯೂ ಮಾಡಲು ಸರಕಾರ ತೀರ್ಮಾನ ಮಾಡಿದ್ದು ಈ ನೀತಿಯು ಕೇವಲ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಹಗಲಲ್ಲಿ ಬಹಳಷ್ಟು ಜನಸಂಚಾರ ಇರುವುದರಿಂದ ಈ ವ್ಯವಸ್ಥೆಯು ದಾರಿ ತಪ್ಪುವ ಸಾಧ್ಯತೆ ಇದೆ.

ನೈಟ್ ಕರ್ಫ್ಯೂ ಇದ್ದರು ಬಸ್ ಸಂಚಾರ ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು ಆಟೋ ಸಂಚಾರವು ಇದೆ ಎಂಬುದಾದರೆ ನಿರ್ಬಂಧ ಯಾವುದಕ್ಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಆತುರದಲ್ಲಿ ನೈಟ್ ಕರ್ಫ್ಯೂ ಘೋಷಿಸಿದ ಸರಕಾರ ನಿಲುವೇನು?

ವಿವಿಧ ಆಯಾಮಗಳಲ್ಲಿ ಅವಲೋಕಿಸಿದಾಗ ನೈಟ್ ಕರ್ಫ್ಯೂ ಅಷ್ಟೊಂದು ಪರಿಣಾಮಕಾರಿಯಲ್ಲ ಎಂಬುದು ಮೇಲ್ನೋಟಕ್ಕೆ ತೋರುತ್ತಿದೆ. ಜನ ಸಂಚಾರ ಇಲ್ಲದ ಹೊತ್ತಲ್ಲಿ ಕರ್ಫ್ಯೂ ಘೋಷಿಸಿ ಏನು ಪ್ರಯೋಜನ ಎಂದು ಜನರಾಡಿಕೊಳ್ಳುತ್ತಿದ್ದು ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಕೈಗಾರಿಕೆ, ನೈಟ್ ಶಿಫ್ಟ್ ಆಧರಿತ ಕಂಪೆನಿಗಳಿಗೆ ಶೇ.50 ರಷ್ಡು ನೌಕರರ ಮೂಲಕ ಕಾರ್ಯಾಚರಣೆಗೆ ಅನುಮತಿ. ನೌಕರರು ಕಂಪನಿ, ಕೈಗಾರಿಕೆಗಳ ಐಡಿಕಾರ್ಡ್ ತೋರಿಸಿ ಹೋಗಬೇಕು. ಕೈಗಾರಿಕೆಗಳಿಗೆ 24/7 ಕಾರ್ಯನಿರ್ವಹಿಸಲು ಯಾವುದೇ ಅಡ್ಡಿ ಇಲ್ಲ.

ದೂರದ ಪ್ರಯಾಣದ ಬಸ್ ಮತ್ತು ರೈಲ್ವೇಗಳಿಗೆ ಅನುಮತಿ!

ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಓಲಾ, ಉಬರ್, ಆಟೋಗಳ ಸಂಚಾರಕ್ಕೆ ಅವಕಾಶ!

ಬಸ್‍ನಿಲ್ದಾಣ, ರೈಲು ಸ್ಟೇಶನ್, ಏರ್ ಪೋರ್ಟ್ ಗಳಿಂದ ಪಿಕಪ್, ಡ್ರಾಪ್ ಗೆ ಮಾತ್ರ ಅವಕಾಶವಿದ್ದು, ಅಧಿಕಾರಿಗಳು ಕೇಳಿದಾಗ ಟಿಕೆಟ್ ತೋರಿಸಬೇಕು.

Leave a comment

Design a site like this with WordPress.com
Get started