


ಇಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಾದ ಡಾ. ಅನಿಲ್ ಥಾಮಸ್ ರವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಾದ ಡಾ. ಅನಿಲ್ ಥಾಮಸ್ ರವರನ್ನು ಸ್ವಾಗತಿಸಲಾಯಿತು.
ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ದಾವುದ್ ಅಬೂಬಕರ್ ರವರ ಮಾರ್ಗದರ್ಶನದಲ್ಲಿ ಉಪಾಧ್ಯಕ್ಷರಾದ ರುಡಾಲ್ಫ್ ಡಿಸೋಜರವರ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆಸಲಾಯಿತು.
ರಾಜ್ಯ ಅ.ಸಂ.ಮೋ. ಕಾರ್ಯದರ್ಶಿಯವರಾದ ಸಲೀಂ ಅಂಬಾಗಿಲುರವರು ಅಲ್ಪಸಂಖ್ಯಾತರ ಯೋಜನೆಗಳ ಬಗ್ಗೆ ಮಾತನಾಡಿದರು.
ಜಿಲ್ಲಾ ಮಹಿಳಾ ಮೋರ್ಚಾ ದ ಅಧ್ಯಕ್ಷೆಯವರಾದ ವೀಣಾ ಶೆಟ್ಟಿ ಯವರು ಉಡುಪಿ ಜಿಲ್ಲೆ ಕರಾವಳಿ ಭಾಗದಲ್ಲಿ ಈ ಬಾರಿಯ ಅಲ್ಪಸಂಖ್ಯಾತ ಮೋರ್ಚಾ ತಂಡ ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಚೆನ್ನಾಗಿ ಕೆಲಸ ಮಾಡುವ ರೀತಿಯನ್ನು ವಿವರಿಸಿದರು.
ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಭಾರಿಯವರಾದ ನಯನಾ ಗಣೇಶ್ ಸಭೆಯಲ್ಲಿ ಹಾಜರಿದ್ದರು.
ಜಿಲ್ಲಾ ಅ.ಸಂ. ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿ’ಸೋಜರವರು ಅಲ್ಪಸಂಖ್ಯಾತರಿಗಿರುವ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಪ್ರತೀ ಮಂಡಲಗಳಲ್ಲಿ, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಅಧ್ಯಕ್ಷರಾದ ದಾವುದ್ ಅಬೂಬಕರ್ ನೇತೃತ್ವದಲ್ಲಿ ಮತ್ತು ಜಿಲ್ಲಾಡಳಿತ, ಅಲ್ಪಸಂಖ್ಯಾತರ ಕಲ್ಯಾಣಇಲಾಖೆಯ ಅಧಿಕಾರಿಗಳನ್ನು ಸೇರಿಸಿ ಜಂಟಿ ಸಭೆ ನಡೆಸಿ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಗುವುದು ಎಂಬ ಭರವಸೆಯನ್ನು ನೀಡಿದರು.
ಪ್ರಧಾನ ಕಾರ್ಯದರ್ಶಿ ಆಸೀಪ್ ಶೇಕ್ ಕಟಪಾಡಿಯವರು ವೇದಿಕೆಯ ಲ್ಲಿ ಉಪಸ್ಥಿತರಿದ್ದವರಿಗೆ ಬಿಜೆಪಿ ಶಾಲು ಹೊದಿಸಿ ಸನ್ಮಾನಿಸಿದರು.
ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಲ್ಪಸಂಖ್ಯಾತ ಪ್ರತಿನಿಧಿಗಳನ್ನು ಸಭೆಯಲ್ಲಿ ಗೌರವಿಸಲಾಯಿತು.
ಉಡುಪಿ ಜಿಲ್ಲಾ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮಂಡಲಗಳ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಗಳು, ಕಾರ್ಯಕಾರಿಣಿ ಸದಸ್ಯರು ಸಭೆಯಲ್ಲಿ ಹಾಜರಿದ್ದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿ ಅಮೀನ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯವರಾದ ಮಂಜುನಾಥ್ ಮಣಿಪಾಲ, ಮತ್ತಿತರರು ಸಭೆಯಲ್ಲಿ ಪಾಲ್ಗೊಂಡರು.
ಜಿಲ್ಲಾ ಅಲ್ಪಸಂಖ್ಯಾತ ಕಚೇರಿ ಕಾರ್ಯದರ್ಶಿ ಮೈಕೆಲ್ ಡಿಸೋಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರ