
ಪಂಚಾಂಗ
ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಪಾಲ್ಗುಣ ಮಾಸ, ಶುಕ್ಲ ಪಕ್ಷ. ತಿಥಿ : ಹುಣ್ಣಿಮೆ,
ನಕ್ಷತ್ರ : ಉತ್ತರ, ವಾರ : ಭಾನುವಾರ,
ರಾಹುಕಾಲ: 5.03 ರಿಂದ 6.34
ಗುಳಿಕಕಾಲ: 3.32 ರಿಂದ 5.03
ಯಮಗಂಡಕಾಲ: 12.29 ರಿಂದ 2.00
ಮೇಷ
ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಬಂಧುಗಳ ಆಗಮನದಿಂದ ಸಂತೋಷದ ವಾತಾವರಣ. ಸಂಬಂಧಿಕರೊಂದಿಗೆ ಸುದೀರ್ಘ ಆಪ್ತ ಸಮಾಲೋಚನೆಯಿಂದಾಗಿ ಬಾಂಧವ್ಯದಲ್ಲಿ ವೃದ್ಧಿ.
ವೃಷಭ
ಮನೆಯವರ ಅಸಮ್ಮತಿಯ ನಡುವೆಯೂ ಉದ್ಯೋಗದ ಸಲುವಾಗಿ ದೂರದ ಪ್ರಯಾಣ. ಪತ್ನಿವರ್ಗದವರಿಂದ ಸಹಾಯ. ಸಂಬಂಧಿಗಳ ಮಧ್ಯಸ್ಥಿಕೆಯಿಂದಾಗಿ ಸಮಸ್ಯೆಗಳು ನಿವಾರಣೆಯಾಗಲಿವೆ.
ಮಿಥುನ
ತುರ್ತು ವಿಷಯಕ್ಕಾಗಿ ಸಂಬಂಧಿಕರ ನೆರವನ್ನು ಪಡೆಯಬೇಕಾದೀತು. ಸಂಸಾರದಲ್ಲಿ ನೆಮ್ಮದಿ. ಅನಗತ್ಯ ಸುತ್ತಾಟದಿಂದಾಗಿ ದೇಹಾಲಸ್ಯ. ಗುರುದೇವತಾ ದರ್ಶನ ಮಾಡುವ ಸಾಧ್ಯತೆ ಕಂಡುಬರುವುದು.
ಕಟಕ
ಚಿನ್ನಾಭರಣಗಳ ವ್ಯವಹಾರ ಪ್ರಾರಂಭಿಸಲು ಉತ್ತಮ ದಿನ. ಲೆಕ್ಕಪತ್ರ ಪರಿಶೀಲನೆಯಲ್ಲಿ ಹೆಚ್ಚಿನ ಕಾಲ ಕಳೆಯಬೇಕಾದೀತು. ಉತ್ತಮ ಆದಾಯ. ಪುಸ್ತಕ ಗ್ರಂಥಗಳ ಖರೀದಿಗಾಗಿ ವೆಚ್ಚವನ್ನು ಭರಿಸಬೇಕಾದೀತು.
ಸಿಂಹ
ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬ್ಯಾಂಕ್ ಮುಂತಾದ ಹಣಕಾಸು ಸಂಸ್ಥೆಗಳ ಮೊರಹೊಗಬೇಕಾದೀತು. ದೂರದ ಪ್ರಯಾಣ. ಸ್ವಂತ ವಾಹನ ಖರೀದಿಯಿಂದ ನೆಮ್ಮದಿ.
ಕನ್ಯಾ
ತಂದೆ–ತಾಯಿಗಳಿಗೆ ಮಕ್ಕಳ ಸಲುವಾಗಿ ವಿದೇಶ ಪ್ರಯಾಣ ಯೋಗ. ಸತ್ಪುರುಷರ ಸಂದರ್ಶನ ಮಾಡುವ ಸಾಧ್ಯತೆ. ಅಧ್ಯಯನದಲ್ಲಿಯ ಆಸಕ್ತಿಯಿಂದಾಗಿ ಉತ್ತಮ ಭವಿಷ್ಯ ನಿರ್ಮಾಣಕ್ಕೆ ಮಾರ್ಗವಾಗಲಿದೆ.
ತುಲಾ
ಹೊಸದಾಗಿ ಕಟ್ಟಿಸುತ್ತಿರುವ ಮನೆಯ ಕೆಲಸಗಳು ಪೂರ್ಣಗೊಂಡು ನೆಮ್ಮದಿ. ಮಕ್ಕಳಿಗೆ ವಿವಾಹ ವಿಷಯದಲ್ಲಿ ನೆಂಟರಿಂದ ಒತ್ತಾಯಪೂರ್ವಕ ಪ್ರಸ್ತಾಪಗಳು ಬರಲಿದೆ. ಸಾಲದಿಂದ ಮುಕ್ತಿ ಹೊಂದುವಿರಿ.
ವೃಶ್ಚಿಕ
ವೈಯಕ್ತಿಕ ವಿಚಾರಗಳತ್ತ ಹೆಚ್ಚಿನ ಗಮನ ಹರಿಸಬೇಕಾದೀತು. ನೆರೆಯವರೊಂದಿಗೆ ಸ್ನೇಹ ಸಂಬಂಧಗಳು ವೃದ್ಧಿಯಾಗಲಿವೆ. ವಾಸಸ್ಥಳ ಬದಲಾವಣೆ ಸಾಧ್ಯತೆ. ಅತಿಯಾದ ಪ್ರಯಾಣದಿಂದಾಗಿ ದೇಹಾಯಾಸ.
ಧನು
ತರಕಾರಿ, ಹಣ್ಣುಗಳ ವ್ಯಾಪಾರಸ್ಥರಿಗೆ ಬಹು ಬೇಡಿಕೆಯಿಂದಾಗಿ ಅಧಿಕ ಲಾಭ. ಪತ್ನಿ ವರ್ಗದವರ ಮನೆಗಳಿಗೆ ಕುಟುಂಬ ಸಮೇತರಾಗಿ ಭೇಟಿ ಸಾಧ್ಯತೆ. ಧಾನ್ಯ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ.
ಮಕರ
ಸಂಶೋಧನಾ ಕಾರ್ಯಗಳು ಭರದಿಂದ ಸಾಗುವುದರ ಜೊತೆಗೆ ಕಾಮಗಾರಿಗಳು ಹೆಚ್ಚಳಗೊಳ್ಳುವವು. ಹಣಕಾಸಿನ ಅನುಕೂಲತೆ. ಮನೆಯವರ ದೂರ ಪ್ರಯಾಣದಿಂದಾಗಿ ಒಂಟಿತನ ಮನೆ ಮಾಡೀತು.
ಕುಂಭ
ಪ್ರಾಪ್ತ ವಯಸ್ಕರು ವೈವಾಹಿಕ ಜೀವನಕ್ಕೆ ಕಾಲಿಡಲು ಮಾಡಿದ ಪ್ರಯತ್ನಗಳು ಫಲ ನೀಡಲಿವೆ. ಗಣ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸುವ ಸಾಧ್ಯತೆ. ನಿಮ್ಮ ಸಹಾಯ ಸಲಹೆ ಕೋರಿ ಬರುವವರಿಗೆ ಸಹಾಯ ನೀಡಿ.
ಮೀನ
ಸಹೋದ್ಯೋಗಿಗಳೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವಿರಿ. ಲೋಕೋಪಯೋಗಿ ಇಲಾಖೆ, ತಾಂತ್ರಿಕ ಕೆಲಸ ಮಾಡುವವರಿಗೆ ಅನುಕೂಲ. ರಾಜಕೀಯದಲ್ಲಿ ತಲ್ಲೀನರಾದವರಿಗೆ ಮಾನಸಿಕ ದ್ವಂದ್ವಗಳು ಏರ್ಪಡಲಿದೆ.