ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಗ್ರಾಮಾಂತರ ಬೂತ್ ಸಂಖ್ಯೆ 178 ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.

ಬೂತಿನ ಹಿರಿಯ ಕಾರ್ಯಕರ್ತ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಪಕ್ಷದ ದ್ವಜಾರೋಹಣವನ್ನು ನೆರವೇರಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು, ಬೆಳವಣಿಗೆ, ಸಾಧನೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅನಿಲ್ ರಾಜ್ ಅಂಚನ್, ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠದ ಜಿಲ್ಲಾ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾಶಕ್ತಿ ಕೇಂದ್ರದ ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ಪೂಜಾರಿ, ಬೂತ್ ಕಾರ್ಯದರ್ಶಿ ಅಶೋಕ್ ಅಂಚನ್, ಪ್ರವೀಣ್ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started