ಲೋಕ ಕ್ಷೇಮಕ್ಕಾಗಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆ

ಉಡುಪಿ ಕ್ಷೇತ್ರದ ಸದ್ಭಕ್ತರೆಲ್ಲಾ ಸೇರಿ ಕೊರೋನಾ ಮುಕ್ತ ಭಾರತ, ಸುಖೀ ಸಮೃದ್ಧ ಸುಭಿಕ್ಷ ಶಾಂತಿಪೂರ್ಣ ನೆಮ್ಮದಿಯ ಭಾರತ ಮತ್ತು ಲೋಕ ಕ್ಷೇಮಕ್ಕಾಗಿ ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿಜಿ ಯವರಿಗೆ ಕೊರೋನಾ ಸಂಕಷ್ಟದ ಹೋರಾಟದಲ್ಲಿ ಅದ್ಭುತ ಯಶಸ್ಸು ಸಿಗಲೆಂದು ಪ್ರಾರ್ಥಿಸಿ ಉಡುಪಿ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ಸೇವೆಯನ್ನು ಸಲ್ಲಿಸಿದರು.

ಪೂಜ್ಯ ಪಲಿಮಾರು ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಮಠದ ಶ್ರೀಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಸುಬ್ರಹ್ಮಣ್ಯ ದೇವರಿಗೆ 1008 ಸೀಯಾಳ (ಎಳನೀರು) ಅಭಿಷೇಕ ನೆರವೇರಿತು. ಶಾಸಕ ಶ್ರೀ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಮೊದಲಾದವರು ಉಪಸ್ಥಿತರಿದ್ದರು.

ವೇದಮೂರ್ತಿ ರಾಮಕೃಷ್ಣ ತಂತ್ರಿ ಕುಕ್ಕಿಕಟ್ಟೆ ಮತ್ತು ದೇವಳದ ಅರ್ಚಕರು, ಸಿಬ್ಬಂದಿ ಹಾಗೂ ವಾಸುದೇವ ಭಟ್ ಪೆರಂಪಳ್ಳಿ ಇವರ ಸಂಯೋಜನೆ ಸಹಕಾರದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿತು.

Leave a comment

Design a site like this with WordPress.com
Get started