
ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಆಂದೋಲನ” ಸಂಬಂಧ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ವಾರ್ಡಿನಲ್ಲಿ ಗ್ರಾಮಸ್ಥರು, ಭೂ ಮಾಲಕರು ಮತ್ತು ಸ್ಥಳೀಯ ಪ್ರಮುಖರೊಂದಿಗೆ ಶಾಸಕ ಕೆ.ರಘುಪತಿ ಭಟ್ ಭೂಮಿ ಪೂಜೆ ನೆರವೇರಿಸಿ ಹಡಿಲು ಕೃಷಿ ಭೂಮಿಯ ಉಳುಮೆಗೆ ಚಾಲನೆ ನೀಡಿದರು.
ಬಳಿಕ ಹಡಿಲು ಭೂಮಿಯ ಸುತ್ತಮುತ್ತಲಿನ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ ಗದ್ದೆಗಳ ನೀರು ಸಮರ್ಪಕವಾಗಿ ಹರಿದು ಹೋಗುವಂತೆ ತೋಡುಗಳನ್ನು ಪುನಶ್ಚೇತನಗೊಳಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಕಪ್ಪೆಟ್ಟು, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಗೌರವ ಸಲಹೆಗಾರ ರಾಜೇಂದ್ರ ಪಂದುಬೆಟ್ಟು, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಸುನಿಲ್ ಕುಮಾರ್, ಹರೀಶ್ ಆಚಾರ್ಯ, ಮಹೇಂದ್ರ ಕೋಟ್ಯಾನ್, ವಿನೋದ್ ಪೂಜಾರಿ, ಸುರೇಶ್ ಶೆಟ್ಟಿ, ಶರತ್ ಶೆಟ್ಟಿ, ಭುವನೇಂದ್ರ, ಗ್ರಾ.ಪಂ. ಸದಸ್ಯ ಹರೀಶ್ ಪಾಲನ್ ಕಪ್ಪೆಟ್ಟು, ಮಾಜಿ ಗ್ರಾ.ಪಂ. ಸದಸ್ಯೆ ದಯಾಶಿನಿ ಪಂದುಬೆಟ್ಟು, ಸ್ಥಳೀಯರಾದ ಶಿವಾಜಿ ಸನಿಲ್, ರಾಧಾಕೃಷ್ಣ, ಗಣೇಶ್ ಪೂಜಾರಿ ಕಪ್ಪೆಟ್ಟು, ಡೇನಿಸ್ ಕ್ವಾರ್ಡ್ರಸ್ ಕಿದಿಯೂರು, ಗಿರೀಶ್ ಅಮೀನ್, ರಾಜೇಶ್ ಪೂಜಾರಿ, ಕೀರ್ತನ, ವಿಠಲ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.
ಸ್ಥಳೀಯ ಕೃಷಿಕರು, ಊರಿನ ಹಿರಿಯರು, ಭೂ ಮಾಲಕರು ಹಾಗೂ ಹಡಿಲು ಭೂಮಿ ಕೃಷಿ ಆಂದೋಲನಕ್ಕೆ ಕೈಜೋಡಿಸಿರುವ ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಶಾಸಕ ಕೆ.ರಘುಪತಿ ಭಟ್ ಅವರು ಕೃತಜ್ಞತೆಗಳನ್ನು ಸಲ್ಲಿಸಿ, ಹಡಿಲು ಭೂಮಿ ಕೃಷಿಯ ಸಂಪೂರ್ಣ ಯಶಸ್ಸಿಗೆ ಎಲ್ಲರ ಸಹಕಾರವನ್ನು ಕೋರಿದರು.