ಅನಾಥ ಮಕ್ಕಳ ನೆರವಿಗೆ ನಿಂತ ಮೋದಿ ಸರ್ಕಾರ, ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆ ಜಾರಿ

ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವಾಗಲು ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ವಿಶೇಷ ಯೋಜನೆ ಘೋಷಿಸಿದೆ. ಅನಾಥರಾದ ಮಕ್ಕಳಿಗೆ 18 ವರ್ಷ ತುಂಬಿದ ಕೂಡಲೇ 10 ಲಕ್ಷ ರೂಪಾಯಿ ಮೀಸಲು ನಿಧಿಯಿಂದ ಮಾಸಿಕ ಸ್ಟೈಫಂಡ್ ನೀಡಲಾಗುತ್ತದೆ. ಮಕ್ಕಳು 23 ವರ್ಷಕ್ಕೆ ಕಾಲಿಟ್ಟಾಗ ಉನ್ನತ ಶಿಕ್ಷಣ ಮತ್ತಿತರ ಖರ್ಚಿಗೆ 10 ಲಕ್ಷ ರೂಪಾಯಿ ನಗದು ನೆರವು ನೀಡಲಾಗುವುದು. 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯ, ಖಾಸಗಿ ಶಾಲೆಗಳಲ್ಲಿContinue reading “ಅನಾಥ ಮಕ್ಕಳ ನೆರವಿಗೆ ನಿಂತ ಮೋದಿ ಸರ್ಕಾರ, ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆ ಜಾರಿ”

ಕೊರೋನಾದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪಿಂಚಣಿ ಸೌಲಭ್ಯ

ನವದೆಹಲಿ: ಕಾರ್ಮಿಕರ ರಾಜ್ಯ ವಿಮಾ ನಿಗಮ ಪಿಂಚಣಿ ಯೋಜನೆಯ ಪ್ರಯೋಜನವನ್ನು ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ವಿಸ್ತರಿಸಲಾಗುವುದು. ದುಡಿಯುವ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳ ಆರ್ಥಿಕ ಸಂಕಷ್ಟ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊರೋನಾದಿಂದ ಮೃತಪಟ್ಟವರ ಕುಟುಂಬಕ್ಕೆ ಮೃತ ಕಾರ್ಮಿಕನ ಒಂದು ದಿನದ ಸರಾಸರಿ ವೇತನದ ಶೇಕಡ 90 ರಷ್ಟು ಪಿಂಚಣಿ ರೂಪದಲ್ಲಿ ನೀಡಲಾಗುವುದು. ಕಳೆದ ವರ್ಷ ಮಾರ್ಚ್ 24 ರಿಂದ ಅನ್ವಯವಾಗುವಂತೆ ನಿಯಮ ಜಾರಿಗೆ ಬರಲಿದ್ದು, 2022 ರ ಮಾರ್ಚ್ 24 ರContinue reading “ಕೊರೋನಾದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಪಿಂಚಣಿ ಸೌಲಭ್ಯ”

ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿರುವ ಕಾರಣ ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಮೇ 2021ರ ಒಂದು ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶContinue reading “ಕೋವಿಡ್ ಸಂಕಷ್ಟದ ಹಿನ್ನೆಲೆ ಮೇ ತಿಂಗಳ ಮೋಟಾರು ವಾಹನ ತೆರಿಗೆಗೆ ರಾಜ್ಯದಲ್ಲಿ ವಿನಾಯಿತಿ ಘೋಷಣೆ”

Design a site like this with WordPress.com
Get started