ಉಸ್ತುವಾರಿ ಸಚಿವರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ ಜೂನ್ 14 ರಿಂದ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಆದೇಶ ಮುಂದುವರಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ಉಸ್ತುವಾರಿ ಸಚಿವರ ಜೊತೆಗಿನ ಸಭೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ಡೌನ್ ಆದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ಹೇಳಿದ್ದಾರೆ.Continue reading “11 ಜಿಲ್ಲೆಗಳಲ್ಲಿ ‘ಲಾಕ್ ಡೌನ್’ ಮುಂದುವರಿಸಲು ಸಿಎಂ ಯಡಿಯೂರಪ್ಪ ಘೋಷಣೆ”
Daily Archives: June 10, 2021
ಕೊರೋನಾ ವಾರಿಯರ್ಸ್ ಗೆ ಸನ್ಮಾನ
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನತೆಯ ಆರೋಗ್ಯ ಸಂರಕ್ಷಣೆಯ ಸತ್ಕಾರ್ಯದಲ್ಲಿ ಸೇವಾ ನಿರತರಾಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರಾದ ಉಡುಪಿಯ ಪ್ರವೀಣ, ಮಲ್ಪೆಯ ವಿಶಾಲ ನಾಯ್ಕ್ ಹಾಗೂ ಆಶಾ ಕಾರ್ಯಕರ್ತೆಯರಾದ ಅಂಬಲಪಾಡಿ ನಗರದ ಸರಸ್ವತಿ ಕೆ. ಶ್ರೀಯಾನ್, ಅಂಬಲಪಾಡಿ ಗ್ರಾಮಾಂತರದ ಗಾಯತ್ರಿ, ಕಪ್ಪೆಟ್ಟು ವಾರ್ಡಿನ ನಿಶಾ ಕಿದಿಯೂರು ಮತ್ತು ಉಚಿತ ಆಟೋ ಸೇವೆ ನೀಡುತ್ತಿರುವ ಆಟೋ ಚಾಲಕ ಶ್ರೀನಿವಾಸ್ ಕಪ್ಪೆಟ್ಟು ಇವರನ್ನು ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿContinue reading “ಕೊರೋನಾ ವಾರಿಯರ್ಸ್ ಗೆ ಸನ್ಮಾನ”
ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ
ಬೆಂಗಳೂರು, ಜೂ.10: ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಮುಂದುವರಿಸುವ ಕುರಿತಂತೆ ಇಂದು(ಜೂ.10) ಸಂಜೆ ಸಚಿವರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಅವರು ಇಂದು ಕೋವಿಡ್ ಸೋಂಕು ತೀವ್ರವಾಗಿರುವ ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಸೋಂಕು ನಿಯಂತ್ರಣ ಕುರಿತಂತೆ ಚರ್ಚಿಸಿದರು. ಈ ವೇಳೆContinue reading “ದ.ಕ. ಸೇರಿದಂತೆ 8 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರಿಕೆ ಬಗ್ಗೆ ಇಂದು ಸಂಜೆ ತೀರ್ಮಾನ: ಸಿಎಂ”