ಬಿಜೆಪಿ ಮುಖಂಡ, ಸಾಮಾಜಿಕ ಕಾರ್ಯಕರ್ತ ಶಿರ್ವದ ಸುನೀಲ್ ಕಬ್ರಾಲ್ ನಿಧನಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ

ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ, ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡು ಪಕ್ಷದ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಂತು ಪಕ್ಷಕ್ಕಾಗಿ ದುಡಿದ ಶಿರ್ವದ ಸುನೀಲ್ ಕಬ್ರಾಲ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದ ಸದಸ್ಯರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started