ಅಂಬಲಪಾಡಿ ಗ್ರಾಮ : 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಹಡಿಲು ಭೂಮಿ ಕೃಷಿ ಅಂದೋಲನದಡಿ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಉಡುಪಿ ಇದರ ಆಶ್ರಯದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 35 ಎಕ್ರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಜು.1ರಂದು ಅಂಬಲಪಾಡಿ ಗ್ರಾಮದ ಕುಂಜಗುಡ್ಡೆಯಲ್ಲಿ 15 ಎಕ್ರೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಎಮ್. ಗಂಗಾಧರ್ ರಾವ್ ಅಧ್ಯಕ್ಷರು ಯಕ್ಷಗಾನ ಕಲಾರಂಗ ಉಡುಪಿ ಹಾಗೂ ಎಮ್. ಗೋಪಾಲ್ ಭಟ್ ಅಧ್ಯಕ್ಷರು ಎ.ಸಿ.ಸಿ.ಇ.ಎ. ಉಡುಪಿ ಇವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲಕ ಯಂತ್ರ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ, ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಹೆಬ್ಬಾರ್, ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೆಶನ್ ಕಾರ್ಯದರ್ಶಿ ಅಮಿತ್ ಅರವಿಂದ್, ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸ್ಥಳೀಯ ಹಿರಿಯ ಕೃಷಿಕ ಸಂಜೀವ ಶೆಟ್ಟಿ ಕುಂಜಗುಡ್ಡೆ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ, ಟ್ರಸ್ಟ್ ಸದಸ್ಯ ದಿನಕರ ಬಾಬು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಗ್ರಾಮೋತ್ಥಾನ ಸಮಿತಿ ಅಂಬಲಪಾಡಿ ಇದರ ಗೌರವ ಸಂಚಾಲಕ ಯೋಗೀಶ್ ಶೆಟ್ಟಿ, ಪ್ರಧಾನ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಸಹ ಸಂಚಾಲಕರಾದ ರಾಜೇಶ್ ಸುವರ್ಣ, ಮಹೇಂದ್ರ ಕೋಟ್ಯಾನ್, ಹರೀಶ್ ಆಚಾರ್ಯ, ವಿನೋದ್ ಪೂಜಾರಿ, ಅಣ್ಣು ಪದ್ಮನಾಭ ಪೂಜಾರಿ, ಶ್ರೀಧರ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ ಭಾಸ್ಕರ್, ಕುಸುಮ, ಸುಜಾತ ಸುಧಾಕರ್, ಸ್ಥಳೀಯ ಕೃಷಿಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started