ಉದ್ಯಮಿ ಎಚ್. ಎಸ್. ಶೆಟ್ಟಿಯವರಿಂದ ಯಕ್ಷಗಾನ ಕಲಾರಂಗಕ್ಕೆ ಭೇಟಿ

ಮೈಸೂರು ಮರ್ಕಂಟೈಲ್ ಕಂ. ಲಿ. ನ ಆಡಳಿತ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿಯವರು ಕಲಾರಂಗಕ್ಕೆ ಭೇಟಿ ನೀಡಿ ಸಂಸ್ಥೆಯ ಚಟುವಟಿಕೆಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರಿನ ವೈದ್ಯವಿಜ್ಞಾನಿ ಡಾ! ರಾಜಾ ವಿಜಯ್ ಕುಮಾರ್ ಅವರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ಶಾಲು-ಸ್ಮರಣಿಕೆ ನೀಡಿ ಗೌರವಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ವಿವರಿಸಿದರು.

ಇದಕ್ಕೂ ಮೊದಲು ಉಭಯರು ಸಂಸ್ಥೆಯ ಸಾಧನೆಯನ್ನು ಒಳಗೊಂಡಿರುವ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಸಂಸ್ಥೆಯ ವ್ಯಾಪಕವಾದ ಕಾರ್ಯಚಟುವಟಿಕೆಯನ್ನು ಶ್ಲಾಘಿಸಿ ಸಾಮಾಜಿಮುಖಿಯಾಗಿ ಮಾಡುತ್ತಿರುವ ಕೆಲಸಗಳನ್ನು ಅಭಿನಂದಿಸಿದರು. ಸಂಸ್ಥೆಯ ಪ್ರಕಟಣೆಯ ಹೊತ್ತಗೆಗಳನ್ನು ನೀಡಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ಕೆ. ಗಣೇಶ್ ರಾವ್, ಉದ್ಯಮಿ ಯು. ವಿಶ್ವನಾಥ ಶೆಣೈ ಉಪಸ್ಥಿತರಿದ್ದರು.

ಪದಾಧಿಕಾರಿಗಳಾದ ಎಸ್. ವಿ. ಭಟ್, ವಿ.ಜಿ. ಶೆಟ್ಟಿ, ಮನೋಹರ ಕೆ., ಕೆ. ಸದಾಶಿವ ರಾವ್, ಎಚ್. ಎನ್. ಶೃಂಗೇಶ್ವರ ಹಾಗೂ ಸಂಸ್ಥೆಯ ಸದಸ್ಯರಾದ ಬಿ.ಭುವನಪ್ರಸಾದ್ ಹೆಗ್ಡೆ, ಅನಂತರಾಜ್ ಉಪಾಧ್ಯ, ಕಿಶೋರ್ ಸಿ. ಉದ್ಯಾವರ, ಕೆ. ಅಜಿತ್ ಕುಮಾರ್, ಅಶೋಕ್ ಎಮ್. ಉಪಸ್ಥಿತರಿದ್ದರು. ನಾರಾಯಣ ಎಂ. ಹೆಗಡೆ ವಂದಿಸಿದರು.

Leave a comment

Design a site like this with WordPress.com
Get started