ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆContinue reading “ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ವಿಧವಾ ವೇತನ, ಅಂಗವಿಕಲ ವೇತನ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ”
Daily Archives: July 28, 2021
ಅಲೆವೂರು ಪ್ರಗತಿನಗರದಲ್ಲಿ ದಾಸ ಸಿಂಚನ
ಅಲೆವೂರು ಪ್ರಗತಿನಗರದ ಶ್ರೀ ನಾಗರಾಜ ರಕ್ತೇಶ್ವರಿ ಸನ್ನಿಧಾನದಲ್ಲಿಖ್ಯಾತ ಗಾಯಕರೂ ದಾಸ ಸಿಂಚನ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಬೆಂಗಳೂರಿನ ಎಮ್ ಎಸ್ ಗಿರಿಧರ್ ಹಾಗೂ ವಸುಧಾ ಜಿ ಇವರಿಗೆ ಪಂಚಗಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ ಕಾಮತ್, ಸಂಸ್ಥೆಯ ಅಧ್ಯಕ್ಷರಾದ ರಾಮ ನಾಯ್ಕ್, ಪ್ರಮುಖರಾದ ಶ್ರೀಕಾಂತ ನಾಯಕ್, ಸತೀಶ್, ನಾಗರಾಜ್ ಆಚಾರ್ಯ, ರಾಘವೇಂದ್ರ ಆಚಾರ್ಯ, ಸುಜಾತ, ಗೀತಾ, ಆಶಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ
ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗ ಎನ್ನು ಸಂಸ್ಥೆಯ ದತ್ತು ಸ್ವೀಕಾರ ಕಾರ್ಯಕ್ರಮದಡಿ, ಇವರ ಕೋರಿಕೆಯ ಮೇರೆಗೆ ಸಂಸ್ಥೆಯ ಹಿತೈಷಿಯಾದ ಶ್ರೀ ಹರಿಕ್ರಷ್ಣ ಭಟ್ ಮೂಡು ಅಲೆವೂರು ಕರ್ವಾಲು ಇವರು ಸುಮಾರು ರೂ.11500/- ಮೊತ್ತದ ನೋಟ್ ಪುಸ್ತಕ, ಪೆನ್ ಪೆನ್ಸಿಲ್ ಇತ್ಯಾದಿ ಮಕ್ಕಳಿಗೆ ಬೇಕಾಗುವ ಪರಿಕರಗಳನ್ನು ನೀಡಿರುವರು. ಅವರಿಗೆ ಶ್ರೀ ವಿಷ್ಣು ಸ್ನೇಹ ಬಳಗ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಕರ್ವಾಲು ಇವರು ಧನ್ಯವಾದಗಳನ್ನು ಅರ್ಪಿಸಿರುವರು. ಈ ಸಂದರ್ಭದಲ್ಲಿContinue reading “ಮೂಡು ಅಲೆವೂರು ಕರ್ವಾಲು ಸರಕಾರಿ ಶಾಲಾ ಮಕ್ಕಳಿಗೆ ಕರ್ವಾಲಿನ ಶ್ರೀ ವಿಷ್ಣು ಸ್ನೇಹ ಬಳಗದಿಂದ ಶಾಲಾ ಪರಿಕರ ವಿತರಣೆ”