
ಅಲೆವೂರು ಪ್ರಗತಿನಗರದ ಶ್ರೀ ನಾಗರಾಜ ರಕ್ತೇಶ್ವರಿ ಸನ್ನಿಧಾನದಲ್ಲಿಖ್ಯಾತ ಗಾಯಕರೂ ದಾಸ ಸಿಂಚನ ಕಾರ್ಯಕ್ರಮದ ಮೂಲಕ ಮನೆ ಮಾತಾಗಿರುವ ಬೆಂಗಳೂರಿನ ಎಮ್ ಎಸ್ ಗಿರಿಧರ್ ಹಾಗೂ ವಸುಧಾ ಜಿ ಇವರಿಗೆ ಪಂಚಗಾನ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ ಕಾಮತ್, ಸಂಸ್ಥೆಯ ಅಧ್ಯಕ್ಷರಾದ ರಾಮ ನಾಯ್ಕ್, ಪ್ರಮುಖರಾದ ಶ್ರೀಕಾಂತ ನಾಯಕ್, ಸತೀಶ್, ನಾಗರಾಜ್ ಆಚಾರ್ಯ, ರಾಘವೇಂದ್ರ ಆಚಾರ್ಯ, ಸುಜಾತ, ಗೀತಾ, ಆಶಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.