ಪಕ್ಷ ಸಂಘಟನೆ ಮತ್ತು ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ‘ಆಶೀರ್ವಾದ ಯಾತ್ರೆ ಸಮಾವೇಶ’ ಹಾಗೂ ನೂತನ ‘ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರ ಅಭಿನಂದನಾ ಸಮಾರಂಭ’ವು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಆಗಸ್ಟ್ 16, ಸೋಮವಾರ ಬೆಳಿಗ್ಗೆ 11.45ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿ ಕೇಂದ್ರContinue reading “ಉಡುಪಿ ಪುರಭವನದಲ್ಲಿ ಜಿಲ್ಲಾ ಬಿಜೆಪಿಯಿಂದ ಆಶೀರ್ವಾದ ಯಾತ್ರೆ, ನೂತನ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಅಭಿನಂದನೆ.”
Daily Archives: August 10, 2021
ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ
ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್.ಅಂಗಾರ ಮೀನುಗಾರಿಕೆ, ಬಂದರು ಮತ್ತುContinue reading “ಕರಾವಳಿ ಸಚಿವರಿಗೆ ಪ್ರಮುಖ ಖಾತೆ: ಉಡುಪಿ ಜಿಲ್ಲಾ ಬಿಜೆಪಿ ಹರ್ಷ “
ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ
ಉಡುಪಿಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಇದರ ಅಧ್ಯಕ್ಷರು ಹಾಗೂ ಕರಾಟೆ ಮುಖ್ಯ ಶಿಕ್ಷಕರು, ಮುಖ್ಯ ಪರೀಕ್ಷಕರು ಆಗಿರುವ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ ಇವರು ಕರಾಟೆ ಕ್ರೀಡೆಯ ಪ್ರಮುಖ ಘಟ್ಟವಾಗಿರುವ ಬ್ಲ್ಯಾಕ್ ಬೆಲ್ಟ್ ಆರನೇ ಪದವಿಯನ್ನು ಪಡೆಯುವುದರೊಂದಿಗೆ ಶಿಹಾನ್ ಶ್ರೇಣಿಯಿಂದ ರೆಂಷಿ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ. ಇವರು ಕರಾಟೆ ಬ್ಲ್ಯಾಕ್ ಬೆಲ್ಟ್ ಆರನೇ ಪದವಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿ, ಕರಾಟೆ ಬುಡೋಕಾನ್ ಇಂಟರ್ನ್ಯಾಷನಲ್ ಆಸ್ಟ್ರೇಲಿಯಾ ಇದರ ಏಷ್ಯಾ ಮುಖ್ಯ ಶಿಕ್ಷಕ ಹಂಷಿ ಬಿ. ಪರಮೇಶ್Continue reading “ಕರಾಟೆ ಬ್ಲ್ಯಾಕ್ ಬೆಲ್ಟ್ ನಲ್ಲಿ ಆರನೇ ಪದವಿ ಪಡೆದ ಶಿಹಾನ್ ವಾಮನ್ ಪಾಲನ್ ಅಂಬಲಪಾಡಿ”