
ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 167ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ, ಉಪಾಧ್ಯಕ್ಷ ಎ. ಶಿವಕುಮಾರ್, ಕೋಶಾಧಿಕಾರಿ ದಯಾನಂದ ಎ., ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಕುಶಲ್ ಕುಮಾರ್ ಎ., ರಮೇಶ್ ಕೋಟ್ಯಾನ್, ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಸುಧಾಕರ ಪೂಜಾರಿ, ನಿತಿನ್ ಕುಮಾರ್, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಕಾರ್ಯದರ್ಶಿ ಜಯಂತಿ ಹರೀಶ್, ಅರ್ಚಕರಾದ ಅವಿನಾಶ್ ಪೂಜಾರಿ, ಅದಿತ್ ಪೂಜಾರಿ, ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.