ಡಿಜಿಟಲ್ ಪಾವತಿಗೆ ಇನ್ನಷ್ಟು ಉತ್ತೇಜನ ಕೊಡುವ ಉದ್ದೇಶದಿಂದ ಇ-ರುಪಿ ಸೌಲಭ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ಸಂಜೆ 4:30ಕ್ಕೆ ಚಾಲನೆ ಕೊಟ್ಟಿದ್ದಾರೆ. ಏನಿದು ಇ-ರುಪಿ ? ನಗದುರಹಿತ ಹಾಗೂ ಸಂಪರ್ಕರಹಿತವಾಗಿ ಡಿಜಿಟಲ್ ಪಾವತಿ ಮಾಡಲು ಇರುವ ವ್ಯವಸ್ಥೆ ಆಗಿರುವ ಇ-ರುಪಿ ಕ್ಯೂಆರ್ ಕೋಡ್ ಹಾಗೂ ಎಸ್ಎಂಎಸ್ ಆಧರಿತ ಇ-ವೌಚರ್ ಆಗಿದ್ದು, ಫಲಾನುಭವಿಗಳ ಮೊಬೈಲ್ಗಳಿಗೆ ಕಳುಹಿಸಲಾಗುವುದು. ಒಮ್ಮೆ-ಪಾವತಿ ಮಾಡುವ ಈ ಸೌಲಭ್ಯದ ಮುಖಾಂತರ ಕಾರ್ಡ್ ಇಲ್ಲದೆಯೂ ಈ ವೌಚರ್ ಅನ್ನು ಯಾವುದೇ ಕಾರ್ಡ್, ಡಿಜಿಟಲ್ ಪೇಮೆಂಟ್ ಅಪ್ಲಿಕೇಶನ್Continue reading “ಏನಿದು ಇ-ರುಪಿ…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ”
Monthly Archives: August 2021
ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ; ಕೋಟ ಶ್ರೀನಿವಾಸ ಪೂಜಾರಿ ಸಹಿತ ನೂತನ 29 ಸಚಿವರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ಹಲವು ಹೊಸ ಮುಖಗಳಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ. ರಾಜಭವನದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಿದರು. ಹಿರಿಯ ಶಾಸಕ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣವನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ
ಭಾರತೀಯ ಜನತಾ ಪಾರ್ಟಿ *ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ* ಗುಜ್ಜಿ ವಾರ್ಡ್, ಜನರಲ್ ಶಾಖೆ, ಅಹಮ್ಮದಿ ಮಾಲ್ ಈ ವಾರ್ಡ್ ಗಳ ವಾರ್ಡ್ ಸಭೆಯು ಇಂದು ಮಲ್ಲಾರು ಮಾರಿಗುಡಿ ಬಳಿ ವಾರ್ಡ್ ಅಧ್ಯಕ್ಷರುಗಳಾದ ಶ್ರೀನಿವಾಸ್, ಬಾಬು, ಮತ್ತು ಹೈದರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಭೆಯಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ಇವರು ವಾರ್ಡ್ ಅಧ್ಯಕ್ಷರುಗಳ ಜವಾಬ್ದಾರಿ, ಪ್ರಧಾನ ಮಂತ್ರಿಗಳ ಮನ್ ಕೀ ಬಾತ್, ವಾರ್ಡ್ ಸಭೆ ಬಗ್ಗೆ, ಚುನಾವಣೆಯ ಬಗ್ಗೆ, ಪಕ್ಷ ಸಂಘಟನೆContinue reading “ಭಾರತೀಯ ಜನತಾ ಪಾರ್ಟಿ ಕಾಪು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಾರ್ಡ್ ಸಭೆ“