ಉಡುಪಿಯ ಬೂಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ತಂಡಕ್ಕೆ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪ್ರಶಸ್ತಿ

ಕರ್ನಾಟಕ ಸ್ಟೇಟ್ ಕರಾಟೆ ಅಸೋಸಿಯೇಶನ್(ರಿ.), ಮೌಲೆ ಶೋಟೋಕಾನ್ ಕರಾಟೆ ದೊ ಅಸೋಸಿಯೇಶನ್ ಇಂಡಿಯಾ, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್(ರಿ.) ಇವರ ಜಂಟಿ ಆಶ್ರಯದಲ್ಲಿ ಸೆ.1ರಂದು ಶಿವಮೊಗ್ಗ ಸ್ಕೌಟ್ಸ್ ಭವನದಲ್ಲಿ ನಡೆದ ಮಲ್ನಾಡ್ ಓಪನ್ ನ್ಯಾಷನಲ್ ಲೆವೆಲ್ ಕರಾಟೆ ಚಾಂಪಿಯನ್ಶಿಪ್ 2021 ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಬುಡೋಕಾನ್ ಕರಾಟೆ ಎಂಡ್ ಸ್ಪೋರ್ಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೆಂಷಿ ವಾಮನ್‌ ಪಾಲನ್ ಇವರಿಂದ ತರಬೇತಿ ಪಡೆದ ಕರಾಟೆ ಪಟುಗಳಾದ ಅರ್ಮಾನ್ ಶೆಟ್ಟಿ, ಯಶ್ ಶೆಟ್ಟಿ, ಪವನ್ ಕುಮಾರ್, ಮೊಹಮ್ಮದ್ ರಾಹಿಲ್, ನಿಶಾಂತ್, ಆಯುಷ್ ಆರ್.ಪಿ.,‌ ಓಂ ಸಾಗರ್, ಪ್ರೀತಮ್ ಇವರು ಭಾಗವಹಿಸಿ 6 ಚಿನ್ನದ ಪದಕ, 2 ಬೆಳ್ಳಿಯ ಪದಕ ಹಾಗೂ 4 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡು ಟೀಮ್ ಚಾಂಪಿಯನ್ಶಿಪ್ ಟ್ರೋಫಿಯನ್ನು ಪಡೆದಿರುತ್ತಾರೆ.

Leave a comment

Design a site like this with WordPress.com
Get started