ಬಿಜೆಪಿ ಭರ್ಜರಿ ಗೆಲುವು ಸಂಘಟಿತ ಹೋರಾಟಕ್ಕೆ ಸಂದ ಜಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ :ಕುತೂಹಲ ಕೆರಳಿಸಿರುವ ರಾಜ್ಯದ ಪ್ರಮುಖ ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಸಂಘಟಿತ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

ಕಾಂಗ್ರೆಸ್ಸನ್ನು ಎಲ್ಲಾ ಕಡೆಗಳಲ್ಲಿಯೂ ಅಧಿಕಾರದಿಂದ ಹೊರಗಿಟ್ಟ ಜನತೆಗೆ ಅಭಿನಂದನೆ ಸಲ್ಲಿಸಿರುವ ಅವರು, ಈ ಫಲಿತಾಂಶ ಮುಂದಿನ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ ಎಂದಿದ್ದಾರೆ.

Leave a comment

Design a site like this with WordPress.com
Get started