
ಉಚ್ಚಿಲ ಮಹಾಶಕ್ತಿಕೇಂದ್ರದಲ್ಲಿ ನಾಮಫಲಕ ಸಮಾವೇಶ ನಡೆಯಿತು. ಬೂತ್ ಅಧ್ಯಕ್ಷರು ಯಾವ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಹಾಗೂ ಬೂತ್ ಅಧ್ಯಕ್ಷರ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದೆವು. ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ ಕೋಟ್ಯನ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಸಭೆಯಲ್ಲಿ ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಹಿಳಾಮೋರ್ಚ ಜಿಲ್ಲಾ ಉಪಾಧ್ಯಕ್ಷರಾದ ಕೇಸರಿ ಯುವರಾಜ್ ಉಪಸ್ಥಿತರಿದ್ದರು. ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಕೇಶವ ಮೊಯ್ಲಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರುಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
.