
ಕಾಪು: ಇಂದು ಶಿರ್ವ ಮಹಾಶಕ್ತಿಕೇಂದ್ರದ ಬೂತ್ ಅಧ್ಯಕ್ಷರ ನಾಮ ಫಲಕ ಸಮಾವೇಶ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಸಂದೀಪ್ ಮಜೂರು ಇವರ ಅಧ್ಯಕ್ಷತೆಯಲ್ಲಿ ಕಳತ್ತೂರು ಗುರ್ಮೆ ಸುರೇಶ್ ಶೆಟ್ಟಿ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಮಹಾಶಕ್ತಿಕೇಂದ್ರದ ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕ ನೀಡಲಾಯಿತು. ಕಾಪು ಮಂಡಲದ ಕಾರ್ಯದರ್ಶಿ, ಕುತ್ಯಾರು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲತಾ ಅಚಾರ್ಯ ಸ್ವಾಗತಿಸಿದರು .ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅವರು ಪ್ರಾಸ್ತಾವಿಕ ಮಾತುಗಳನ್ನು ಆಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಹಾಗೂ ಪಕ್ಷದ ಚಟುವಟಿಕೆಗಳನ್ನು ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ಸರಕಾರದ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಮಾತನಾಡಿದರು .ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ,ಬಿಜೆಪಿ ಜಿಲ್ಲಾಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರು ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ,ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕ್ಷೇತ್ರದ ನಿಕಟ ಪೂರ್ವ ಅಧ್ಯಕ್ಷರು ಪ್ರಕಾಶ್ ಶೆಟ್ಟಿ,ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಗುರ್ಮೆ ,ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು . ಶಿರ್ವ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ ನಿರೂಪಣೆ ಮಾಡಿದರು . ಸಭೆಯಲ್ಲಿ ಬೂತ್ ಅಧ್ಯಕ್ಷರುಗಳು ,ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.