
ಉದ್ಯಾವರ ಬಿಜೆಪಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ ನಾಮಫಲಕ ಸಮಾವೇಶವು ಇಂದು ಉದ್ಯಾವರ ಸೌಂದರ್ಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ರವಿ ಕೋಟ್ಯಾನ್ ರವರು ವಹಿಸಿದ್ದರು. ಕಾಪು ಕ್ಷೇತ್ರಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಬೂತ್ ಅಧ್ಯಕ್ಷರ ಜವಾಬ್ದಾರಿ ಮತ್ತು ಪಕ್ಷ ಸಂಘಟನೆಯ ಬಗ್ಗೆ ಹೆಚ್ಚಿನ ಒತ್ತುಕೊಡುವಂತೆ ತಿಳಿಸಿದರು.ರಾಜ್ಯಕಾರ್ಯಕಾರಿಣಿಯ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆಯವರು ಎಲ್ಲಾ ಬೂತ್ ಅಧ್ಯಕ್ಷರುಗಳಿಗೆ ನಾಮಫಲಕವನ್ನು ನೀಡಿ ಶುಭ ಹಾರೈಸಿದರು. ಸಭೆಯಲ್ಲಿ ಇಂದು ನಿಧನರಾದ ರಾಜ್ಯ ಸಭಾ ಸದಸ್ಯರಾದ ಮಾನ್ಯ ಓಸ್ಕರ್ ಫೆರ್ನಾಂಡಿಸ್ ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆಯಾದ ನಯನ ಗಣೇಶ್,ಉದ್ಯಾವರ ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಶ್ರೀಯಾನ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ,ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಅಲೆವೂರು,ಕಾಪು ಬಿಜೆಪಿ ಮಂಡಲ ಕಾರ್ಯದರ್ಶಿಗಳಾದ ರಾಜೇಶ್ ಕುಂದರ್,ಜಿಲ್ಲಾ ಪ್ರಕೋಷ್ಠ ಸಂಚಾಲಕರಾದ ವಿಜಯ್ ಕುಮಾರ್, ಜಿಲ್ಲಾ ಫಲಾನುಭವಿಗಳ ಪ್ರಕೋಷ್ಠ ಸಂಚಾಲಕರಾದ ಸಂತೋಷ್ ಸುವರ್ಣ ಬೊಳ್ಜೆ,ಕಾಪು ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ಪಿತ್ರೋಡಿ,ಜಿಲ್ಲಾ ಯುವಮೋರ್ಚ ಉಪಾಧ್ಯಕ್ಷರಾದ ಸಚಿನ್ ಬೊಳ್ಜೆ,ಜಿಲ್ಲಾ ಯುವಮೋರ್ಚ ಕಾರ್ಯದರ್ಶಿ ಸತೀಶ್ ಬೀರಪ್ಪಾಡಿ,ಬಿಜೆಪಿಯ ಪ್ರಮುಖರಾದ ಜಿತೇಂದ್ರ ಶೆಟ್ಟಿ,ರಮಾನಂದ ಶೇರಿಗಾರ್,ಚೇತನ್ ಪಿತ್ರೋಡಿ,ದಿನೇಶ್ ಕರ್ಕೇರ,ಹೇಮಂತ್ ಉದ್ಯಾವರ ಮತ್ತು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಎಲ್ಲ ಬೂತಿನ ಬೂತ್ ಅಧ್ಯಕ್ಷರು,ಶಕ್ತಿಕೇಂದ್ರ ಪ್ರಮುಖರು,ಪಂಚಾಯತ್ ಸದಸ್ಯರುಗಳು,ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು