
ಕಾಪು: ಇನ್ನಂಜೆ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ, ಮೋದಿಜಿ ಜನ್ಮದಿನಾಚರಣೆಯಿಂದ ಅಕ್ಟೋಬರ್ 7ರವರೆಗೆ ನಡೆಯುವ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಇನ್ನಂಜೆ ಪೇಟೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗುವುದರ ಮೂಲಕ ಆರಂಭ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ರವರು ಕಾರ್ಯಕ್ರಮದ ಬಗ್ಗೆ ಮತ್ತು ಮೋದಿಜಿ ಅವರ ಸಾಧನೆಯ ಬಗ್ಗೆ ವಿವರವಾಗಿ ಪ್ರಾಸ್ತಾವಿಕ ಮಾತನಾಡಿ ಮೋದಿಜಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿ ಧನ್ಯವಾದಗೈದರು. ನಂತರ ಇನ್ನಂಜೆ ಪಂಚಾಯತ್ ನಲ್ಲಿ ಎಸ್ ಆರ್ ಎಲ್ ಎಮ್ ನಲ್ಲಿ ಕಾರ್ಯ ನಿರ್ವಹಿಸುತ್ತಿರ ಸ್ವಚ್ಛತಾ ಸಿಬ್ಬಂದಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸುವ ಮೂಲಕ ಸಮರ್ಪಣಾ ಕಾರ್ಯಕ್ರಮ ನಡೆಸಲಾಯಿತು. ಪೋಸ್ಟ್ ಕಾರ್ಡ್ ಅಭಿಯಾನದ ಅಂಗವಾಗಿ ಸುಮಾರು 75 ಪೋಸ್ಟ್ ಕಾರ್ಡ್ ಗಳನ್ನು ಜನರಿಗೆ ಹಂಚಿ ಮೋದಿ ಅವರಿಗೆ ಧನ್ಯವಾದ ಬರೆದು ಪೋಸ್ಟ್ ಮಾಡಲಾಯಿತು. ನಂತರ ಬ್ಯಾನರ್ ನಲ್ಲಿ ಮೋದಿಜಿ ನಿಮ್ಮ ಜೊತೆ ನಾವಿದ್ದೇವೆ ಎಂದು ಸಹಿ ಸಂಗ್ರಹಣಾ ಅಭಿಯಾನ ನಡೆಸಲಾಯಿತು.
ಈ ಕಾರ್ಯಕ್ರಮದ ವೇದಿಕೆಯಲ್ಲಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ಶಿಲ್ಪಾ ಜಿ ಸುವರ್ಣ, ಇನ್ನಂಜೆ ಪಂಚಾಯತ್ ಅಧ್ಯಕ್ಷರು ಆದ ಶ್ರೀಮತಿ ಮಲ್ಲಿಕಾ ಆಚಾರ್ಯ, ಉಪಾಧ್ಯಕ್ಷರು ಆದ ಸುರೇಶ್ ಶೆಟ್ಟಿ, ಕುರ್ಕಾಲು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಗುರುಕೃಪಾ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಗೋಪಾಲಕೃಷ್ಣ ರಾವ್, ಇನ್ನಂಜೆ ಶಕ್ತಿಕೇಂದ್ರ ಅಧ್ಯಕ್ಷರು ಆದ ಶ್ರೀ ಪ್ರವೀಣ್ ಶೆಟ್ಟಿ ಪಾಂಗಾಳ, ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ, ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಪವಿತ್ರ ಶೆಟ್ಟಿ, ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿ ಮಾಲಿನಿ ಇನ್ನಂಜೆ, ಕಾಪು ಪ್ರಕೋಷ್ಟ ಸಂಚಾಲಕರು ಆದ ನಾಗೇಶ್ ಭಂಡಾರಿ, ಕಾಪು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಸಂದೀಪ್ ಶೆಟ್ಟಿ. ಪ್ರಮುಖರು ಆದ ಶ್ರೀ ಮುರಳೀಧರ ಪೈ, ರತ್ನಕರ ಶೆಟ್ಟಿ ಕಾಪು, ಪಂಚಾಯತ್ ಸದಸ್ಯರಾದ ಸುರೇಖಾ ಶೆಟ್ಟಿ, ದಿವೇಶ್ ಶೆಟ್ಟಿ, ವಾರ್ಡ್ ಅಧ್ಯಕ್ಷರುಗಳಾದ, ಶೈಲೇಶ್ ಶೆಟ್ಟಿ, ಮಧುಸೂಧನ್ ಆಚಾರ್ಯ, ಗಣೇಶ್ ಆಚಾರ್ಯ, ಮತ್ತು ಪಕ್ಷದ ಅನನ್ಯ ಜವಾಬ್ದಾರಿ ಇರುವ ಸದಸ್ಯರು ಮತ್ತು ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು.