ಬಿಜೆಪಿ ಮಹಿಳಾ ಮೋರ್ಚಾ ಕಾರ್ಕಳ: ಸೇವೆ ಮತ್ತು ಸಮರ್ಪಣ ಅಭಿಯಾನ

ಕಾರ್ಕಳ :ಸೇವೆ ಮತ್ತು ಸಮರ್ಪಣ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಸಲುವಾಗಿ ಬಿಜೆಪಿ ಮಹಿಳಾ ಮೋರ್ಚಾ ಮತ್ತು ಕುಕ್ಕುಂದೂರು ಮಹಾ ಶಕ್ತಿ ಕೇಂದ್ರದ ವತಿಯಿಂದ ಕೌಡೂರು ಗ್ರಾಮದ ವಿಕಲಚೇತನ ಮಕ್ಕಳಾದ ಅಕ್ಷಯ್ ಹಾಗೂ ಆದಿತ್ಯರವರ ನಿವಾಸಕ್ಕೆ ತೆರಳಿ ಆಹಾರ ಧಾನ್ಯಗಳ ಕಿಟ್ ವಿತರಿಸುವ ಜೊತೆಗೆ ಆರ್ಥಿಕ ನೆರವು ನೀಡಿ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಲಾಯಿತು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಬಿಜೆಪಿ ಕಾರ್ಕಳ ಮಹಿಳಾ ಮೋರ್ಚಾ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಸವಿತಾ ಎಸ್. ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಪ್ರಮುಖರಾದ ದೀಕ್ಷಿತಾ ಶೆಟ್ಟಿ, ಶ್ವೇತಾ ಶೆಟ್ಟಿ, ಮಲ್ಲಿಕಾ ರಾವ್, ಪಲ್ಲವಿ ಪ್ರವೀಣ್, ನಾಗವೇಣಿ, ಜ್ಯೋತಿ ರಮೇಶ್, ಸುಮಾ ರವಿಕಾಂತ್, ವಿನಯ ಡಿ. ಬಂಗೇರ, ಮಂಜುಳಾ ಶೆಟ್ಟಿ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started