
ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಅಂಗವಾಗಿ ಸೇವೆ ಮತ್ತು ಸಮರ್ಪಣೆ ಅಭಿಯಾನದ ಪ್ರಯುಕ್ತ ಸೆ.25ರಂದು ನಡೆಯಲಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನದ ಸಲುವಾಗಿ ಪ್ರತಿ ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ.
ಇದರ ಪ್ರಯುಕ್ತ ಬಿಜೆಪಿ ಉಡುಪಿ ಗ್ರಾಮಾಂತರ ವತಿಯಿಂದ 78 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಭಾವಚಿತ್ರ ನೀಡುವ ಕಾರ್ಯಕ್ರಮಕ್ಕೆ ಬಿಜೆಪಿ ಚೇರ್ಕಾಡಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚೇರ್ಕಾಡಿ ಶಕ್ತಿಕೇಂದ್ರದಲ್ಲಿ ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ಅಧ್ಯಕ್ಷತೆಯಲ್ಲಿ ಮಂಡಲದ ಪ್ರಭಾರಿ ಶ್ರೀಶ ನಾಯಕ್ ಪೆರ್ಣಂಕಿಲ ಹಾಗೂ ಸೆ.25ರ ಜಿಲ್ಲಾ ಕಾರ್ಯಕ್ರಮ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ, ಉಡುಪಿ ಗ್ರಾಮಾಂತರ ಸಂಚಾಲಕ ಉಮೇಶ ನಾಯ್ಕ್ ಚೇರ್ಕಾಡಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮನೋಜ್ ಶೆಟ್ಟಿ ಇವರೆಲ್ಲರೂ ಸೇರಿ ಚಾಲನೆ ನೀಡಿದರು.
ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲದ ಪ್ರತೀ ಬೂತ್ ಮಟ್ಟದಲ್ಲಿ ಸೆ.25ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಆಶಯದಲ್ಲಿ ಚೇರ್ಕಾಡಿ, ಕರ್ಜೆ, 38ನೇ ಕಳ್ತೂರು, ಕೆಂಜೂರೂ, ಕೊಕ್ಕರ್ಣೆ, ನಾಲ್ಕೂರು ಶಕ್ತಿ ಕೇಂದ್ರದ ಒಟ್ಟು 29 ಬೂತ್ ಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರ, ಪರಿಚಯ ಪತ್ರ, ಪ್ರತಿಜ್ಞಾ ಪತ್ರ ಹಾಗೂ ಪೋಸ್ಟ್ ಕಾರ್ಡ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಗ್ರಾಮಾಂತರ ಉಪಾಧ್ಯಕ್ಷ ಹಾಗೂ ಕಾರ್ಯಕ್ರಮದ ಮಂಡಲ ಸಂಚಾಲಕ ರಘುಪತಿ ಬ್ರಹ್ಮಾವರ, ಸಹ ಸಂಚಾಲಕ ನಿತ್ಯಾನಂದ ಬಿ. ಆರ್., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಶಕ್ತಿಕೇಂದ್ರಗಳ ಸಂಚಾಲಕರು, ಸಹ ಸಂಚಾಲಕರು, ಬೂತ್ ಅಧ್ಯಕ್ಷರು, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.