
ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಶಿರ್ವ ಜೀವನ ಜ್ಯೋತಿ ಆಶ್ರಮಕ್ಕೆ ಹಣ್ಣು ಹಂಪಲು, ಅಕ್ಕಿ ಮತ್ತು ದಿನಸಿ ವಸ್ತುಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷ ಎಂ.ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್, ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಶಶಿಕುಮಾರ್ ಶಿರ್ವ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಸುರೇಂದ್ರ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಮತ್ತು ಶಿರ್ವದ ಶ್ರೀನಿವಾಸ್ ಶೆಣೈ ಯವರ ಮನೆಗೆ ಸೌಹಾರ್ದ ಭೇಟಿ ನೀಡಲಾಯಿತು.