
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಕಾರ್ಯಕಾರಿ ಸಮಿತಿ ಸಭೆಯ ಸೆ.23ರಂದು ಉಡುಪಿ ಪ್ರಾದೇಶಿಕ ಕಛೇರಿಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷರಾದ ನವೀನ್ ಅಮೀನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷರಾದ ದೇವದಾಸ ಹೆಬ್ಬಾರ್, ಮಾಜಿ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಜಿಲ್ಲಾ ನಿರ್ದೇಶಕರಾದ ಗಣೇಶ್ ಬಿ., ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ್, ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಜಿಲ್ಲಾ ವ್ಯಾಪ್ತಿಯ ತಾಲೂಕು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಗಾಂಧಿ ಜಯಂತಿ ಆಚರಣೆಯ ಸಹಿತ ಇತರ ಪ್ರಮುಖ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.