ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕಾಪು ಬಿಜೆಪಿ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ ಶಿರ್ವ ಶ್ರೀ ಸಿಧ್ಧಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಕಳೆದ ಏಳು ವರ್ಷಗಳಿಂದ ಒಂದು ದಿನವೂ ವಿಶ್ರಾಂತಿ ಪಡೆಯದೆ ಭಾರತ ಮಾತೆಯನ್ನು ವಿಶ್ವ ವಂದ್ಯ ಮಾಡಲು ಶ್ರಮಿಸುತ್ತಿರುವ ಪ್ರಧಾನಿ ಮೋದೀಜಿಯವರಿಗೆ ಮತ್ತಷ್ಟು ವರ್ಷಗಳ ಕಾಲ ದೇಶ ಸೇವೆ ಮಾಡಲು ಯೋಗ ಭಾಗ್ಯ, ಆಯಸ್ಸು ಆರೋಗ್ಯ ನೀಡಲೆಂದು ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಉಪಾಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಕಾರ್ಯದರ್ಶಿಗಳಾದ ಮಾಲಿನಿ ಇನ್ನಂಜೆ, ಲತಾ ಆಚಾರ್ಯ, ಪೂರ್ಣಿಮಾ ಚಂದ್ರಶೇಖರ್,ರಾಜೇಶ್ ಕುಂದರ್, ಮಾಜಿ ಕಾಪು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಆದ ಶಶಿಪ್ರಭಾ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಸುಶಾಂತ್ ಶೆಟ್ಟಿ, ಶಿರ್ವ, ಪ್ರಮುಖರು ಆದ ಪ್ರಕಾಶ್ ಆಚಾರ್ಯ, ಸುರೇಂದ್ರ ನಾಯಕ್, ಶಿರ್ವ ಪಂಚಾಯತ್ ಸದಸ್ಯರಾದ ಶ್ರೀನಿವಾಸ ಶೆಣೈ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started