ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ

ಕಟಪಾಡಿ ಏಣಗುಡ್ಡೆ ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಮೋದೀಜಿ ಜನ್ಮದಿನದ ಅಂಗವಾಗಿ‌ ಸೇವೆ ಮತ್ತು‌ ಸಮರ್ಪಣೆ ಕಾರ್ಯಕ್ರಮದ ಅಂಗವಾಗಿ ಇಂದು ಪೋಸ್ಟ್ ಕಾರ್ಡ್ ಅಭಿಯಾನ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಶಕ್ತಿಕೇಂದ್ರ ಪ್ರಮುಖ್ ಸಂತೋಷ್ ನೇತ್ರತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು,ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಚಾಲನೆ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗೀತಾಂಜಲಿ‌ ಸುವರ್ಣ, ನಿಕಟಪೂರ್ವ ಬಿಜೆಪಿ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಪಕ್ಷದ ಪ್ರಮುಖರಾದ ಮುರಳೀಧರ ಪೈ, ನಿತಿನ್ ಸೇರಿಗಾರ್, ಸುಭಾಷ್ ಬಲ್ಲಾಳ್, ಕವಿತಾ, ಶ್ರೀನಿವಾಸ್ ಕಿಣಿ, ದಿಲೀಪ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started