ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ

ಉಡುಪಿ :ಅತ್ಯಂತ ಸಂಕಷ್ಟದ ಪರಿಸ್ಥಿತಿಯ ನಡುವೆ ಇಂದು ದೇಶ ಕೊರೋನಾವನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿಯ ‘ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣವಾಗಿದೆ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಕೊರೋನಾ ಸಂಕಷ್ಟದContinue reading “ಸೇವೆಯೇ ಸಂಘಟನೆ’ ತತ್ವದಡಿ ಜಿಲ್ಲಾ ಆರೋಗ್ಯ ಸ್ವಯಂ ಸೇವಕರ ಪಾತ್ರ ಮಹತ್ವಪೂರ್ಣ: ಸಚಿವ ಕೋಟ”

ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ

ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ನಮ್ಮ ಸಂಸ್ಥೆಯ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ಕೊಡುವ ಕಾರ್ಯಕ್ರಮ ಇಂದು‌ ನಡೆಯಿತು. ಮುಖ್ಯ ಅಭ್ಯಾಗತರಾಗಿ‌ ಡಾ.ಸುದರ್ಶನ್ ಭಟ್, ರಘುರಾಮ ಭಟ್, ಹಾಗೂ ನೀತಾ ಪ್ರಭು ಉಪಸ್ಥಿತರಿದ್ದರು. ಶಾಲಾ ಅಭಿವ್ರಧ್ಧಿಗೆ ಹಾಗೂ ಮಕ್ಕಳಿಗೆ ಬೇಕಾಗುವ ಸಕಲ ಸಹಕಾರ ನೀಡಲು ನಾವೆಲ್ಲ ಸದಾ ಸಿಧ್ಧ ಎಂದು ಆಗಮಿಸಿದ ಗಣ್ಯರು ಹೇಳಿದರು. ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ನಾಗರಾಜ್ ಆಚಾರ್ಯ, ಮುಖ್ಯೋಪಾಧ್ಯಾಯರಾದ ಸವಿತ, ವಿಷ್ಣು ಸ್ನೇಹ ಬಳಗದ ಸದಸ್ಯರುಗಳಾದ ರಾಘವೇಂದ್ರ ಆಚಾರ್ಯ,Continue reading “ಸರ್ಕಾರಿ ಕನ್ನಡ ಶಾಲೆ ಉಳಿಸಿ ಅಭಿಯಾನದಡಿ ಕರ್ವಾಲು ಶಾಲಾ ದತ್ತು ಸ್ವೀಕಾರ ಕಾರ್ಯಕ್ರಮದಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ”

ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ.ಸುನೀಲ್ ಕುಮಾರ್

ಮುಂಬರಲಿರುವ ಜಿ.ಪಂ., ತಾ.ಪಂ. ಚುನಾವಣೆಗಳ ಜೊತೆಗೆ ಪಕ್ಷ ಸಂಘಟನೆಯನ್ನು ಕಣ್ಣ ಮುಂದೆ ಇಟ್ಟುಕೊಂಡು ಜಿಲ್ಲೆಯಾದ್ಯಂತ ಬೂತ್ ಸಶಕ್ತೀಕರಣದ ಮೂಲಕ ಹೊಸ ಆಲೋಚನೆಗಳೊಂದಿಗೆ ವಿಸ್ತಾರವಾಗಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ ಎಂದು ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಕರೆ ನೀಡಿದರು. ಅವರು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಮಾಸಿಕ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದರು.Continue reading “ಬೂತ್ ಸಶಕ್ತೀಕರಣದ ಮೂಲಕ ವಿಸ್ತಾರವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ: ಸಚಿವ ವಿ.ಸುನೀಲ್ ಕುಮಾರ್”

Design a site like this with WordPress.com
Get started