ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ, ಅಭಿಮಾನಿಗಳ ಪ್ರೀತಿಯ ‘ಅಪ್ಪು’ ಎಂದೇ ಖ್ಯಾತರಾಗಿದ್ದ ‘ಪವರ್ ಸ್ಟಾರ್’ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಭಾವಪೂರ್ಣ ಶೃದ್ಧಾಂಜಲಿಯನ್ನು ಸಮರ್ಪಿಸುತ್ತದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ರವರು ತನ್ನ ಬದುಕಿನ ಅತ್ಯಮೂಲ್ಯ ಕ್ಷಣಗಳನ್ನು ಕೇವಲ ಚಿತ್ರರಂಗಕ್ಕೆ ಮಾತ್ರ ಮೀಸಲಿಡದೆ ಕನ್ನಡ ನಾಡಿನಾದ್ಯಂತContinue reading “ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡ ನಾಡಿನ ಅನರ್ಘ್ಯ ರತ್ನ : ಕುಯಿಲಾಡಿ ಸುರೇಶ್ ನಾಯಕ್”
Monthly Archives: October 2021
ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ
ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇನ್ನಿಲ್ಲ ಎಂಬ ಸುದ್ದಿ ಬರ ಸಿಡಿಲಿನಂತೆ ಬಂದೆರಗಿದೆ. ದೈಹಿಕ ಕಸರತ್ತು ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಪ್ಪುರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುನೀತ್ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ನೀಡಿದ ಹೇಳಿಕೆಯೇ ಅಭಿಮಾನಿಗಳಲ್ಲಿ ಕಳವಳ ಮೂಡಿಸಿತ್ತು. ಇದೀಗ ಕನ್ನಡ ಚಿತ್ರರಂಗದ ಅಪ್ರತಿಮ ನಟ ಅಗಲಿದ್ದಾರೆ ಎಂಬ ವಾರ್ತೆ ನುಂಗಲಾರದ ತುತ್ತಾಗಿದೆ. ಖ್ಯಾತ ನಟನ ನಿಧನಕ್ಕೆ ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ. ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ಇಂದುContinue reading “ಗಾಜನೂರಿಗೆ ಹೋಗಿಬರುತ್ತೇನೆಂದಿದ್ದ ‘ಪವರ್ ಸ್ಟಾರ್’ ಮರಳಿ ಬಾರದ ಲೋಕಕ್ಕೆ”
ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯ ಡಾ.ರಂಗನಾಥ್ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಪುನೀತ್ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ. ಪುನೀತ್ ತೀವ್ರ ಎದೆನೋವಿನಿಂದ ಬಳಲುತ್ತಿದ್ದರು ಬೆಳಿಗ್ಗೆ 11:30ಕ್ಕೆ ಆಸ್ಪತ್ರೆಗೆ ಆಗಮಿಸಿದ್ದರು. ವಿಕ್ರಂ ಆಸ್ಪತ್ರೆಗೆ ಬರುವ ಮೊದಲೇ ಇಸಿಜಿ ಮಾಡಿಸಿಕೊಂಡು ಬಂದಿದ್ದರು. ಅವರು ಆಸ್ಪತ್ರೆಗೆ ಬರುವಷ್ಟರಲ್ಲೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆContinue reading “ಪುನೀತ್ ರಾಜ್ ಕುಮಾರ್ ಆರೋಗ್ಯ ಕ್ರಿಟಿಕಲ್ ಆಗಿದೆ; ವಿಕ್ರಂ ಆಸ್ಪತ್ರೆ ವೈದ್ಯ ಡಾ.ರಂಗನಾಥ್ ಮಾಹಿ”
ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ
ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,Continue reading “ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ”
ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ
ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ,Continue reading “ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ”
ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ಉಚಿತ ಕನ್ನಡಕ ವಿತರಣೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ವಿಶ್ವದಲ್ಲೇ ಮಾದರಿಯಾಗಿರುವ ಉಚಿತ ಆರೋಗ್ಯ ಸೇವೆ, ರೈತ ಸಮ್ಮಾನ್ ಯೋಜನೆ ಮೂಲಕ ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸಹಿತ ಹಲವಾರು ಜನಪರ ಯೋಜನೆಗಳ ಜೊತೆಗೆ ದೇಶದ ಸಮಗ್ರತೆ ಮತ್ತು ಅಖಂಡತೆಗೆ ವಿಶೇಷ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವವಂದ್ಯರೆನಿಸಿದ್ದಾರೆ. ಇಂದು ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
100 ಕೋಟಿ ಕೋವಿಡ್ ಲಸಿಕೆ ವಿತರಿಸಿ ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಕೋರೋನಾ ವಾರಿಯರ್ಸ್ ಗೆ ಸನ್ಮಾನ – ಶಾಸಕ ರಘುಪತಿ ಭಟ್ ಭಾಗಿ
*ದೇಶದಾದ್ಯಂತ 100 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್ ವಿತರಣೆಗೈದು ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಇಂದು ದಿನಾಂಕ 26-10-2021 ರಂದು ಗ್ರಾಮಾಂತರ ಬಿಜೆಪಿ ವತಿಯಿಂದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಕೋರೋನ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಈ ಸಾಧನೆಗೆ ಶ್ರಮಿಸಿದ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂಸೇವಕರಿಗೆ ಅಭಿನಂದನೆ ಸಲ್ಲಿಸಿದರು.* *ಈ ಸಂದರ್ಭದಲ್ಲಿ ವೈದ್ಯರು, ಶುಶ್ರೂಷಕರು ಹಾಗೂ ಆಶಾ ಕಾರ್ಯಕರ್ತರನ್ನು ಸನ್ಮಾನಿಸಿದರು.*Continue reading “100 ಕೋಟಿ ಕೋವಿಡ್ ಲಸಿಕೆ ವಿತರಿಸಿ ಭಾರತ ವಿಶ್ವ ದಾಖಲೆಗೈದಿರುವ ಹಿನ್ನೆಲೆಯಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಕೋರೋನಾ ವಾರಿಯರ್ಸ್ ಗೆ ಸನ್ಮಾನ – ಶಾಸಕ ರಘುಪತಿ ಭಟ್ ಭಾಗಿ”
ಅಲೆವೂರು ಕರ್ವಾಲು ಹೀಗೊಂದು ಕನ್ನಡ ಶಾಲೆ ಉಳಿಸಿ ಅಭಿಯಾನ
ಕನ್ನಡ ಶಾಲೆಗಳು ನಿಧಾನವಾಗಿ ಹೇಗೆ ಅಂತ್ಯಗೊಳ್ಳುತ್ತಿವೆ ಎಂದು ಎಲ್ಲರಿಗೂ ತಿಳಿದ ವಿಚಾರ. ಆದರೆ ಇದಕ್ಕೆ ಸೆಡ್ಡು ಹೊಡೆದು ನಮ್ಮ ಊರಿನ ಶಾಲೆ ಮುಚ್ಚಬಾರದು ಅದು ನಮ್ಮೂರ ಹೆಮ್ಮೆ ಎಂದು ಕಳೆದ ಐದು ವರ್ಷಗಳಿಂದ ಶಾಲಾ ದತ್ತು ಸ್ವೀಕಾರ ಎನ್ನುವ ಕಾರ್ಯಕ್ರಮ ನಡೆಸಿ ಮುಚ್ಚುವ ಹಂತದಲ್ಲಿದ್ದ ಅಲೆವೂರು ಕರ್ವಾಲಿನ ಸರಕಾರಿ ಕನ್ನಡ ಶಾಲೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಅಲೆವೂರು ಕರ್ವಾಲಿನ ಹೆಮ್ಮೆಯ ಸಂಸ್ಥೆ ಶ್ರೀ ವಿಷ್ಣು ಸ್ನೇಹ ಬಳಗ ಇದೀಗ ಮತ್ತೊಂದು ನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಅದೇ *ನಮ್ಮೂರ ಶಾಲಾContinue reading “ಅಲೆವೂರು ಕರ್ವಾಲು ಹೀಗೊಂದು ಕನ್ನಡ ಶಾಲೆ ಉಳಿಸಿ ಅಭಿಯಾನ”
ಕಾಪು ಮಂಡಲ – ಪದಾಧಿಕಾರಿಗಳ ಸಭೆ
ಕಾಪು: ಬಿಜೆಪಿ ಕಚೇರಿಯಲ್ಲಿ ಮಂಡಲ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು ಮೋರ್ಚ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ ಹಾಗೂ ಶಕ್ತಿಕೇಂದ್ರ ಪದಾಧಿಕಾರಿಗಳ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪದಾಧಿಕಾರಿಗಳಿಗೆ ಪಕ್ಷ ನೂತನವಾಗಿ ಕೊಟ್ಟ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿ ಎಲ್ಲ ಬೂತ್ ಗಳಲ್ಲಿಯೂ ಕಾರ್ಯಕ್ರಮ ನಡೆಯುವಂತಹ ಶಕ್ತಿಕೇಂದ್ರ ಮಹಾಶಕ್ತಿಕೇಂದ್ರ ಪದಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದರು. ಕಾಪು ಕ್ಷೇತ್ರ ಶಾಸಕರಾದ ಲಾಲಾಜಿಯವರು, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಪದಾಧಿಕಾರಿಗಳ ಜವಾಬ್ದಾರಿಗಳನ್ನು ನೆನಪಿಸಿದರು.Continue reading “ಕಾಪು ಮಂಡಲ – ಪದಾಧಿಕಾರಿಗಳ ಸಭೆ”
ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ
ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಸುಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ ರವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕೆ.ರಘುಪತಿ ಭಟ್, ಕರಾವಳಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಗೆ ಸನ್ಮಾನ”