
ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಸುವರ್ಣ, ಭಾರತಿ ಭಾಸ್ಕರ್, ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಹಾಗೂ ಸ್ಥಳೀಯರಾದ ವಿನೋದ್ ಪೂಜಾರಿ, ಪ್ರಕಾಶ್, ಅಭಿರಾಜ್ ಮುಂತಾದವರು ಉಪಸ್ಥಿತರಿದ್ದರು.