ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು



ಕಾಪು: ಕಾಪು ವಿಧಾಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿಯಾಗಿ ಸರಣಿ ಸಭೆಗಳು ನಡೆದವು. ಮಹಾಶಕ್ತಿಕೇಂದ್ರವಾರು ಹಾಗು ನಾಲ್ಕೈದು ಪಂಚಾಯತ್ ಒಟ್ಟು ಸೇರಿಸಿ ಅಲೆವೂರು, ಮುದರಂಗಡಿ ಹಿರಿಯಡ್ಕ ಕಟಪಾಡಿ ಉಚ್ಚಿಲ ಹಾಗೂ ಪಡುಬಿದ್ರೆಯಲ್ಲಿ ಒಟ್ಟು ಆರು ಕಡೆ ಪಂಚಾಯತ್ ಸದಸ್ಯರಿಗೆ ಚುನಾವಣೆಯ ಮಹತ್ವ ಮತದಾನ ಮಾಡುವ ರೀತಿ ಇತ್ಯಾದಿಗಳ ಮಾಹಿತಿ ನೀಡಿದೆವು. ನಮ್ಮ ಅಭ್ಯರ್ಥಿಯೂ ಕರ್ನಾಟಕ ಸರಕಾರದ ಸಚಿವರೂ ಆದ ಕೋಟ ಶ್ರೀನಿವಾಸ ಪೂಜಾರಿ ಎಲ್ಲ ಸಭೆಗಳಲ್ಲಿ ಭಾಗವಹಿಸಿ ತನಗೆ ಮತದಾನ ಮಾಡುವಂತೆ ವಿನಂತಿಸಿದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ರಾಜ್ಯ ಕಾರ್ಯಕಾರಿಣಿ ಸದಸ್ಯರೂ, ಕಾಪು ಕ್ಷೇತ್ರ ಚುನಾವಣಾ ಸಂಚಾಲಕರೂ ಆದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಂಗಳೂರು, ರಾಜ್ಯ ಎಸ್ ಸಿ ಮೋರ್ಚ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರುಗಳಾದ ಜಿಯಾನಂದ ಹೆಗ್ಡೆ, ವಿಶ್ವನಾಥ ಕುರ್ಕಾಲು, ಸಂದೀಪ್ ರವ್, ಚಂದ್ರಶೇಖರ ಕೋಟ್ಯನ್, ಶಿವಪ್ರಸಾದ್ ಶೆಟ್ಟಿ, ಉದ್ಯಾವರ ಮಹಾಶಕ್ತಕೇಂದ್ರ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ರವಿಶೆಟ್ಟಿ ಪಾದೆಬೆಟ್ಟು, ಶಶಿಕಾಂತ್ ಪಡುಬಿದ್ರೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ಗಂಗಾಧರ ಸುವರ್ಣ, ನವೀನ್ ಎಸ್ ಕೆ, ಸಂಧ್ಯಾ ಕಾಮತ್, ಪವಿತ್ರ ಶೆಟ್ಟಿ, ಸುಭಾಸ್ ನಾಯ್ಕ್, ಕೇಶವ ಮೊಯ್ಲಿ, ಮುರಳಿಧರ್ ಪೈ, ಶಶಿಪ್ರಭಾ ಶೆಟ್ಟಿ, ಸಚಿನ್ ಸುವರ್ಣ, ಸುಮಾ ಶೆಟ್ಟಿ, ಎಲ್ಲ ಪಂಚಾಯತ್ ಅಧ್ಯಕ್ಚರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಶಕ್ತಿ ಕೇಂದ್ರ ಪ್ರಮುಖರು, ಜಿಲ್ಲಾ ಮತ್ತು ಮಂಡಲ ಪ್ರಮುಖರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started