Design a site like this with WordPress.com
Get started

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ


ಬೆಂಗಳೂರು: ಕೊರೊನಾ ವೈರಸ್‌ ಮಹಾಮಾರಿ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತರ ಈಗ ಒಮಿಕ್ರಾನ್ ಭಯ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು.

ಒಮಿಕ್ರಾನ್ ನಿಂದ ರಕ್ಷಣೆ ಪಡೆಯುವುದು ಹೇಗೆ? :


ಲಸಿಕೆ : ಭಾರತದಲ್ಲಿ ಲಸಿಕೆ ಅಭಿಯಾನ ಮುಂದುವರೆದಿದೆ, ಭಾರತದ ಅನೇಕರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಆದರೆ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಲಸಿಕೆ ಪಡೆಯದಿರುವವರು ಅಪಾಯಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಹಾಗಾಗಿ ಪ್ರತಿಯೊಬ್ಬರೂ ಕೊರೊನಾ ಲಸಿಕೆ ಪಡೆಯುವ ಅಗತ್ಯವಿದೆ. ಲಸಿಕೆ ಪಡೆಯದ ಜನರಿಗೆ, ಲಸಿಕೆ ಪಡೆಯುವಂತೆ ಸಲಹೆ ನೀಡುವ ಅಗತ್ಯವೂ ಇದೆ.

ಮಾಸ್ಕ್ ಅಗತ್ಯ : ಕೊರೊನಾದಿಂದ ರಕ್ಷಣೆ ಬೇಕೆಂದರೆ ಮಾಸ್ಕ್ ಕಡ್ಡಾಯ. ಮೊದಲ ಅಲೆಯ ಆರಂಭದಿಂದಲೂ ಮಾಸ್ಕ್ ಮಹತ್ವದ ಬಗ್ಗೆ ವೈದ್ಯರು, ತಜ್ಞರು ಸಲಹೆ ನೀಡುತ್ತಲೇ ಬಂದಿದ್ದಾರೆ. ಕೊರೊನಾ ಎರಡನೇ ಅಲೆ ಮುಗಿದ ನಂತರ ಮಾಸ್ಕ್ ಧರಿಸುವವರ ಸಂಖ್ಯೆ ನಿಧಾನವಾಗಿ ಕಡಿಮೆಯಾಗಿದೆ. ಅನೇಕರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುತ್ತಿದ್ದಾರೆ. ಇದು ತಪ್ಪು. ಮಕ್ಕಳಿಂದ ಹಿಡಿದು ಎಲ್ಲರೂ ಮನೆಯಿಂದ ಹೊರ ಬೀಳುವಾಗ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.


ಸಾಮಾಜಿಕ ಅಂತರ : ಕೊರೊನಾದ ಈ ಹೊಸ ರೂಪಾಂತರದಿಂದ ಸಮಸ್ಯೆ ತಪ್ಪಿಸಬೇಕಾದರೆ, ಪ್ರತಿಯೊಬ್ಬರೂ ಮೊದಲಿನಂತೆ ಪರಸ್ಪರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಾಗುತ್ತದೆ. ಅನಗತ್ಯವಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಂದ ದೂರವಿರಬೇಕು.

ಕೈಗಳ ಸ್ವಚ್ಛತೆ: ಕೈಗಳನ್ನು ಸಾಬೂನು ಮತ್ತು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸುತ್ತಿರಬೇಕು. 20 ನಿಮಿಷಗಳ ಕಾಲ ನೀರು ಮತ್ತು ಸಾಬೂನಿನಿಂದ ಕೈಗಳನ್ನು ತೊಳೆಯಬೇಕು. ಹೊರಗೆ ಹೋಗಿ ಮನೆಗೆ ಬಂದ ನಂತ್ರ ಸ್ಯಾನಿಟೈಜರ್ ನಿಂದ ಕೈಗಳನ್ನು ಸ್ವಚ್ಛಗೊಳಿಸಬೇಕು. ಹಾಗೆ ಸ್ನಾನ ಮಾಡುವುದು ಬಹಳ ಮುಖ್ಯ

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: