ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ


ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರದ್ದು ವಿಶಿಷ್ಟವಾದಂಥ ವ್ಯಕ್ತಿತ್ವ. ತುಳುನಾಡಿನ ಗರೋಡಿ, ದೈವಾರಾಧನೆ, ಜಾನಪದ ಸಂಸ್ಕ್ರತಿಯ ಬಗ್ಗೆ ಅಗಾಧವಾದ ಅಧ್ಯಯನ ಮಾಡಿರುವ ಇವರು ತುಳುನಾಡ ಗರೋಡಿಗಳ ಇತಿಹಾಸದ ನಿಘಂಟು ಎಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ಡಿ.9ರಂದು ಬ್ರಹ್ಮಾವರದ ಪರಿಸರದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಯಕ್ಷಗಾನ ಧಾರ್ಮಿಕ ಕಾರ್ಯಕ್ರಮದಲ್ಲಿ ಬನ್ನಂಜೆ ಬಾಬು ಅಮೀನ್ ಅವರನ್ನು ಸನ್ಮಾನಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದ ಬ್ರಹ್ಮಾವರದ ಉದ್ಯಮಿ ಸಂತೋಷ್ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ, ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷ ರಾಜಾರಾಂ ಶೆಟ್ಟಿ, ಡಾ. ಜಗದೀಶ್ ಶೆಟ್ಟಿ, ಬೆಂಗಳೂರಿನ ಉದ್ಯಮಿ ಸತೀಶ್ ಶೆಟ್ಟಿ , ಸ್ಥಳೀಯ ನಾಯಕರಾದ ಶಂಕರ್ ಪೂಜಾರಿ, ಉಮೇಶ್ ಪೂಜಾರಿ ಯಕ್ಷಗಾನ ಸೇವಾಕರ್ತರಾದ ದಿವಂಗತ ವಿಠಲ ಶೆಟ್ಟರ ಕುಟುಂಬಿಕರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started