ಕಾಪು ಪುರಸಭೆ ಚುನಾವಣೆ: ಬಿಜೆಪಿ ಭರ್ಜರಿ ಮತ ಬೇಟೆ

ಉಡುಪಿ: ಕಾಪು ಪುರಸಭಾ ಚುನಾವಣಾ ಪ್ರಚಾರದ ಅಂಗವಾಗಿ ಭರತ್ ನಗರ ವಾರ್ಡಿನ ಅಭ್ಯರ್ಥಿ ಅರುಣ್ ಶೆಟ್ಟಿ ಪಾದೂರು ಪರವಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಬಿಜೆಪಿ ಕಾಪು ಮಂಡಲ ಉಪಾಧ್ಯಕ್ಷ ನವೀನ್ ಎಸ್.ಕೆ., ಪ್ರಮುಖರಾದ ಪ್ರದೀಪ್ ಯು., ನಾಗೇಶ್ ಭಂಡಾರಿ, ಸಮಾಜ ಸೇವಕಿ ನೀತಾ ಪ್ರಭು, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಸಹ ಸಂಚಾಲಕ ದಿನೇಶ್ ಶೆಟ್ಟಿ, ಕುಂದಾಪುರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ರೂಪ ಪೈ, ಸೌರಬಿ ಪೈ, ರೋಹಿಣಿ ಪೈ, ಅನಿತಾ ಶ್ರೀಧರ್, ವಿದ್ಯಾ ಪೈ, ಆಶಾಲತಾ ನಾಯಕ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಗಾಯತ್ರಿ ಪ್ರಭು ಹಾಗೂ ಸ್ಥಳೀಯ ಕಾರ್ಯಕರ್ತರು ಭಾಗವಹಿಸಿದ್ದರು.

Leave a comment

Design a site like this with WordPress.com
Get started