ಉಡುಪಿ ಆಗಸದಲ್ಲಿ ಅಚ್ಚರಿಯ ದೃಶ್ಯ, ಆಕಾಶದಲ್ಲಿಗೋಚರಿಸಿದ ಬೆಳಕಿನ ಸರಮಾಲೆ

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿನ್ನೆ ಸಂಜೆ 7ರ ಸುಮಾರಿಗೆ ಆಗಸದಲ್ಲಿ ಬೆಳಕಿನ ಸರಮಾಲೆ ಗೋಚರಿಸಿದೆ. ಫಳಫಳ ಹೊಳೆಯುವ ಈ ಬೆಳ್ಳಿಚುಕ್ಕಿಗಳು ಸರದಿ ಸಾಲಿನಲ್ಲಿ ಸಾಗುತ್ತಿದ್ದುದನ್ನು ಜನರು ಕೌತುಕದಿಂದ ವೀಕ್ಷಿಸಿದರು. ಏನಿದು ಬೆಳಕಿನ ಸರಮಾಲೆ.?ಎಲಾನ್ ಮಸ್ಕ್ ಮಾಲೀಕತ್ವದ ಬಾಹ್ಯಾಕಾಶ ಸಂಸ್ಥೆ, ಅಮೆರಿಕದ ‘ಸ್ಪೇಸ್ ಎಕ್ಸ್’ ಉಡಾವಣೆ ಮಾಡಿದ ಸರಣಿ ಉಪಗ್ರಹಗಳ ಮಾಲೆಯಿದು. ‘ಸ್ಟಾರ್ ಲಿಂಕ್’ ಎಂಬ ಯೋಜನೆಯಡಿ 1,800ಕ್ಕೂ ಅಧಿಕ ಉಪಗ್ರಹಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ಅವುಗಳಲ್ಲಿ 1,732 ಉಪಗ್ರಹಗಳು ತಮ್ಮ ನಿಗದಿತ ಕಕ್ಷೆಯ‌ಲ್ಲಿContinue reading “ಉಡುಪಿ ಆಗಸದಲ್ಲಿ ಅಚ್ಚರಿಯ ದೃಶ್ಯ, ಆಕಾಶದಲ್ಲಿಗೋಚರಿಸಿದ ಬೆಳಕಿನ ಸರಮಾಲೆ”

ಕೋಟ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ಚಿಂತಕರ ಚಾವಡಿ ಎನಿಸಿರುವ ಮೇಲ್ಮನೆ ಇದೀಗ ಕುಬೇರರ ಮನೆಯಾಗಿದೆ ಎಂಬ ಅಪವಾದದ ನಡುವೆ ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡದೇ ನಯಾ ಪೈಸೆ ಖರ್ಚು ಇಲ್ಲದೇ ಬಿಜೆಪಿ ಬೆಂಬಲಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಎಲ್ಲಾ ಮತಗಳ ಸಹಿತ ಹೆಚ್ಚುವರಿ ಮತವನ್ನು ಪಡೆದು ಸತತ ನಾಲ್ಕನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿರುವ ದ.ಕ. ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಹಾರ್ದಿಕ ಅಭಿನಂದನೆ ಸಲ್ಲಿಸಿದೆ. ರಾಜ್ಯ ವಿಧಾನContinue reading “ಕೋಟ ಚಾರಿತ್ರಿಕ ಗೆಲುವಿಗೆ ಜಿಲ್ಲಾ ಬಿಜೆಪಿ ಅಭಿನಂದನೆ”

ನಾಳೆ ಡಿ.15 ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ

ಉಡುಪಿ: ಪಕ್ಷದ ಸಂಘಟನಾತ್ಮಕ ದೃಷ್ಠಿಯಿಂದ ಬಿಜೆಪಿ ಜಿಲ್ಲಾ ಮಟ್ಟದ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವು ಡಿ.15 ಬುಧವಾರ ಬೆಳಿಗ್ಗೆ ಗಂಟೆ 10.00ರಿಂದ ಉಡುಪಿ ಪುರ ಭವನದಲ್ಲಿ ನಡೆಯಲಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರವರ ಉಪಸ್ಥಿತಿಯಲ್ಲಿ ಜಿಲ್ಲೆಯ ಶಾಸಕರು ಮತ್ತು ಪಕ್ಷದ ವಿವಿಧ ಸ್ತರದ ಮುಖಂಡರ ಸಮಾಗಮದೊಂದಿಗೆ ನಡೆಯಲಿರುವ ಶಕ್ತಿಕೇಂದ್ರ ಪ್ರಮುಖರ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳContinue reading “ನಾಳೆ ಡಿ.15 ಉಡುಪಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಉಪಸ್ಥಿತಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶ”

ಕಾಶೀ ನಗರಿಯ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ: ಶಿವಾನಂದ ಸರಸ್ವತಿ ಸ್ವಾಮೀಜಿ

ಉಡುಪಿ: ಭರತ ಖಂಡವು ಪುಣ್ಯ ಕ್ಷೇತ್ರಗಳ ನೆಲೆವೀಡು. ಪ್ರಾಚೀನ ದೇವಳಗಳ ಅಭಿವೃದ್ಧಿಯಿಂದ ದೇಶದ ಭವ್ಯ ಸಂಸ್ಕೃತಿ, ಶ್ರೀಮಂತ ಪರಂಪರೆಯ ಗತ ವೈಭವ ಮರುಕಳಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ದಿಟ್ಟತನದ ನಿರ್ಧಾರದಿಂದ ಲೋಕಾರ್ಪಣೆಗೊಂಡಿರುವ ಪ್ರಾಚೀನ ಕಾಶೀ ನಗರದ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ ಹಾಡಿದೆ ಎಂದು ಕೈವಲ್ಯ ಮಠಾದೀಶರಾದ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾಪು ಮಂಡಲ ವತಿಯಿಂದContinue reading “ಕಾಶೀ ನಗರಿಯ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ: ಶಿವಾನಂದ ಸರಸ್ವತಿ ಸ್ವಾಮೀಜಿ”

ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಉಡುಪಿಯಲ್ಲಿ ಕಾಶಿ ವಿಶ್ವನಾಥ ಧಾಮದ ಪುನರುತ್ಥಾನ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯ ಸಂಸದರಾಗಿ ಹಾಗೂ ಪ್ರಧಾನಿಯಾಗಿ ಕಂಡ ಕನಸು ಮತ್ತು ಜನತೆಗೆ ನೀಡಿದ ವಾಗ್ದಾನದಂತೆ ಇಂದು ಅವರ ಕಲ್ಪನೆಯ ಭವ್ಯ ವಾರಣಾಸಿ ರೂಪಾಂತರಗೊಳ್ಳುತ್ತಿದೆ. ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ ಭಾರತೀಯ ಐತಿಹಾಸಿಕ ಮತ್ತು ಸಾಂಸ್ಕ್ರತಿಕ ಪರಂಪರೆಯ ಗತ ವೈಭವವನ್ನು ಮತ್ತೆ ಸಾದರಪಡಿಸುವಲ್ಲಿ ಹೊಸ ಮೈಲಿಗಲ್ಲಾಗಲಿದೆ. ನವ ಭಾರತ ನಿರ್ಮಾಣದ ಪರಿಕಲ್ಪನೆಯ ಪ್ರಮುಖ ಘಟ್ಟ ಇದಾಗಿದ್ದು ಪ್ರತಿಯೊಬ್ಬ ಭಾರತೀಯನ ಮನಸಲ್ಲಿ ಭಾರತೀಯತೆಯContinue reading “ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್”

ಡಿ.13ರಂದು ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ “ಭವ್ಯ ಕಾಶೀ ದಿವ್ಯ ಕಾಶೀ” ಅಭಿಯಾನ

ಉಡುಪಿ :ಕಾಶಿ ಅತ್ಯಂತ ಪ್ರಾಚೀನ ಮತ್ತು ಪೌರಾಣಿಕ ನಗರವಾಗಿದ್ದು, ಗಂಗಾ ಮಾತೆಯ ದಡದಲ್ಲಿದೆ. ಇದು ಭಗವಾನ್ ಶಿವನ ಶಿರದಿಂದ ಹುಟ್ಟಿಕೊಂಡಿದೆ ಎಂಬ ಪ್ರತೀತಿ ಇದೆ. ಕಾಶಿಯನ್ನು ಪವಿತ್ರ ಸಪ್ತ ಪುರಿಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಈ ಮಹಾನ್ ನಗರದ ಬಗ್ಗೆ ಖುಗ್ವೇದ, ಸ್ಕಂದ ಪುರಾಣ, ರಾಮಾಯಣ ಮತ್ತು ಮಹಾ ಭಾರತ ಹಾಗೂ ಮತ್ಸ್ಯ ಪುರಾಣ ಸೇರಿದಂತೆ ಅನೇಕ ಗ್ರಂಥಗಳಲ್ಲಿ ಉಲ್ಲೇಖ ಕಂಡುಬರುತ್ತದೆ. ವಿಶ್ವದ ಅತ್ಯಂತ ಜನಪ್ರಿಯ ಜನನಾಯಕರೆನಿಸಿರುವ ದೇಶದ ಪ್ರಧಾನಿ ನರೇಂದ್ರ ಮೋದಿ ಯವರು ಭಾರತದ ಶ್ರೇಷ್ಠContinue reading “ಡಿ.13ರಂದು ಬಿಜೆಪಿ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ “ಭವ್ಯ ಕಾಶೀ ದಿವ್ಯ ಕಾಶೀ” ಅಭಿಯಾನ”

ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ

ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ 169ಎ ಇದನ್ನು ಆದಿಉಡುಪಿಯಿಂದ ಮಲ್ಪೆಯ ವರೆಗೆ ಮತ್ತು ಪರ್ಕಳದಿಂದ ಹೆಬ್ರಿಯ ವರೆಗೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಯೋಜನೆಗೆ ಟೆಂಡರ್ ನೋಟಿಫಿಕೇಶನ್ ಆಗಿದ್ದು, ಜನವರಿ 25ಕ್ಕೆ ಟೆಂಡರ್ ಬಿಡ್ ತೆರೆದು ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಳ್ಳುವ ಪ್ರಕ್ರಿಯೆ ಆರಂಭಗೊಳ್ಳಲಿದೆ. ಪ್ರವಾಸೋದ್ಯಮ ಹಾಗೂ ಮೀನುಗಾರಿಕೆ ವಲಯದ ಅಭಿವೃದ್ಧಿಯ ದೃಷ್ಟಿಯಿಂದ ಮಲ್ಪೆಯಿಂದ ಹೆಬ್ರಿಯ ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಗೊಳಿಸುವುದು ಪ್ರಮುಖ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸಿ ಸದ್ರಿ ಯೋಜನೆಗೆ ಅನುಮೋದನೆContinue reading “ಆದಿಉಡುಪಿ – ಮಲ್ಪೆ ರಸ್ತೆ ಚತುಷ್ಪಥ ಅಭಿವೃದ್ಧಿ ಯೋಜನೆಗೆ ಟೆಂಡರ್ ನೋಟಿಫಿಕೇಶನ್: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಅಭಿನಂದನೆ”

ವಿಧಾನ ಪರಿಷತ್ ಚುನಾವಣೆ: ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರ ಮತದಾನ

ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಒಂದಾಗಿ ಸೇರಿ ಡಿ.10 ಶುಕ್ರವಾರ ಬೆಳಿಗ್ಗೆ 11.00 ಗಂಟೆಯೊಳಗೆ ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಗ್ರಾಮ ಪಂಚಾಯತ್ ಸದಸ್ಯರಾದ ಶಕುಂತಳ ಶೆಟ್ಟಿ, ಭಾರತಿ ಭಾಸ್ಕರ್, ಪ್ರಮೋದ್ ಸಾಲ್ಯಾನ್, ಶಶಿಧರ್ ಸುವರ್ಣ, ಸುಂದರ ಪೂಜಾರಿ, ಸುಮಂಗಲ, ರಾಜೇಶ್ ಸುವರ್ಣ, ಹರೀಶ್ ಪಾಲನ್, ಸುನಿಲ್ ಕಪ್ಪೆಟ್ಟು ಸುಜಾತ ಶೆಟ್ಟಿ, ಕುಸುಮ, ಸುಭಾಷಿನಿ, ಸಬಿತಾ ಮೆಂಡನ್,Continue reading ವಿಧಾನ ಪರಿಷತ್ ಚುನಾವಣೆ: ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರ ಮತದಾನ

ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬನ್ನಂಜೆ ಬಾಬು ಅಮೀನ್ ಅವರದ್ದು ವಿಶಿಷ್ಟವಾದಂಥ ವ್ಯಕ್ತಿತ್ವ. ತುಳುನಾಡಿನ ಗರೋಡಿ, ದೈವಾರಾಧನೆ, ಜಾನಪದ ಸಂಸ್ಕ್ರತಿಯ ಬಗ್ಗೆ ಅಗಾಧವಾದ ಅಧ್ಯಯನ ಮಾಡಿರುವ ಇವರು ತುಳುನಾಡ ಗರೋಡಿಗಳ ಇತಿಹಾಸದ ನಿಘಂಟು ಎಂದು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಡಿ.9ರಂದು ಬ್ರಹ್ಮಾವರದ ಪರಿಸರದಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಯಕ್ಷಗಾನ ಧಾರ್ಮಿಕ ಕಾರ್ಯಕ್ರಮದಲ್ಲಿ ಬನ್ನಂಜೆ ಬಾಬು ಅಮೀನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರಾದContinue reading “ಬನ್ನಂಜೆ ಬಾಬು ಅಮೀನ್ ತುಳುನಾಡ ಗರೋಡಿಗಳ ನಿಘ೦ಟು: ಬೈಕಾಡಿ ಸುಪ್ರಸಾದ್ ಶೆಟ್ಟಿ”

ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ

ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ರಾಜ್ಯದಲ್ಲೇ ವೈಶಿಷ್ಟ್ಯಪೂರ್ಣ: ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲೆಯ ಎಲ್ಲಾ ಮೋರ್ಚಾಗಳು ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. ನಿರಂತರ ವೈವಿಧ್ಯಮಯ ಕಾರ್ಯ ಚಟುವಟಿಕೆಗಳಿಂದ ಜಿಲ್ಲೆಯ ಮೋರ್ಚಾಗಳಲ್ಲೇ ಮೂಂಚೂಣಿಯಲ್ಲಿರುವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಮಲ್ಪೆ ಕಡಲ ತೀರದ ತುದಿಯಲ್ಲಿರುವ ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಂಡಿರುವುದು ರಾಜ್ಯಕ್ಕೇ ಮಾದರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ-ಮಲ್ಪೆ ಕಡಲContinue reading “ಕೋಡಿ ಬೆಂಗ್ರೆ ಬೋಟ್ ಹೌಸ್ ನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆ”

Design a site like this with WordPress.com
Get started