
ಉಡುಪಿ: ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ.
ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.