ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ


ಉಡುಪಿ: ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೂ ಕೂಡಾ ವಿವಿಧ ವಿನೂತನ ಜಾಲಗಳ ಮೂಲಕ ಜನರ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಉಡುಪಿ ಜಿಲ್ಲೆಯಾದ್ಯಂತ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.

ಇದೇ ರೀತಿ ಆಕ್ರಮ ಗೋಕಳವು, ಗೋಹತ್ಯೆ ಮುಂದುವರಿದರೆ ಸಮಾಜದಲ್ಲಿ ಶಾಂತಿ ಭಂಗವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲಾ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುವ ಮೂಲಕ ಶಂಕಿತರ ಪೂರ್ವಾಪರ ದಾಖಲೆಗಳನ್ನು ಪರಿಶೀಲಿಸಿ ಗೋಕಳ್ಳತನ ಮಾಡುವ ಕಟುಕರನ್ನು ಗಡಿಪಾರು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Leave a comment

Design a site like this with WordPress.com
Get started