ಬ್ರಹ್ಮಶ್ರೀ ನಾರಾಯಣ ಗುರು ಸ್ವಾಭಿಮಾನ ಜಾಥಾಕ್ಕೆ ಅಚ್ಯುತ ಅಮೀನ್ ಕಲ್ಮಾಡಿ ಚಾಲನೆ


ಶ್ರೀ ನಾರಾಯಣ ಗುರು ವಿಚಾರ ವೇದಿಕೆ(ರಿ.) ಕರ್ನಾಟಕ ಇದರ ಉಡುಪಿ ಜಿಲ್ಲಾ ಘಟಕದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಭಿಮಾನ ಜಾಥಾದ ವಾಹನಕ್ಕೆ ವೇದಿಕೆಯ ರಾಜ್ಯ ಉಪಾಧ್ಯಕ್ಷ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ(ರಿ.) ಕಲ್ಮಾಡಿ ಇದರ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಶ್ರೀ ಬ್ರಹ್ಮ ಬೈದೇರುಗಳ ಗರೋಡಿಯ ಪರಿಸರದಲ್ಲಿ ಜ.26ರ ಬೆಳಿಗ್ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆ(ರಿ.) ಉಡುಪಿ ತಾಲೂಕು ಅಧ್ಯಕ್ಷ, ಕಲ್ಮಾಡಿ ಗರೋಡಿಯ ಉಪಾಧ್ಯಕ್ಷ ಶಶಿಧರ ಎಂ. ಅಮೀನ್ ವಡಬಾಂಡೇಶ್ವರ, ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋಹರ್ ಜತ್ತನ್, ಕೋಶಾಧಿಕಾರಿ ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕಲ್ಮಾಡಿ ಗರೋಡಿಯ ಆಡಳಿತ ಸಮಿತಿ ಸದಸ್ಯರಾದ ವಿನಯ್ ಪಡುಕರೆ, ಹರೀಶ್ ಎಂ.ಕೆ., ಶಂಕರ ಪೂಜಾರಿ ಮಧ್ವನಗರ, ಜಯಕರ ಪೂಜಾರಿ ಕೊಡವೂರು, ಕಲ್ಮಾಡಿ ಗರೋಡಿ ಮನೆಯ ನಾರಾಯಣ ಪೂಜಾರಿ, ರಾಘವ ಪೂಜಾರಿ, ಪ್ರಮುಖರಾದ ದಾಮೋದರ ಕಲ್ಮಾಡಿ, ಸಾಧು ಪೂಜಾರಿ, ಶಂಕರ ಪೂಜಾರಿ, ರಜತ್ ವಿನಯ್, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started