ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಸರಿ ಭಯದಿಂದ ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್



ಉಡುಪಿ: ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯತ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಅಭಿಮಾನಿಯೊಬ್ಬರು ಕೇಸರಿ ಪೇಟ ತೊಡಿಸಲು ಬಂದ ಅರೆ ಕ್ಷಣದಲ್ಲೇ ವಿಪರೀತ ಭಯಗೊಂಡು ಅದನ್ನು ಕಿತ್ತೊಗೆದ ವಿಲಕ್ಷಣ ಘಟನೆಯೊಂದಿಗೆ ಸಿದ್ದರಾಮಯ್ಯ ತಾನು ಯಾವತ್ತೂ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಜಗಜ್ಜಾಹೀರು ಮಾಡಿದ್ದಾರೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಕೇಸರಿ ಬಣ್ಣ ತ್ಯಾಗದ ಸಂಕೇತ, ಹಿಂದುತ್ವದ ಸಂಕೇತ. ಕಾಂಗ್ರೆಸಿಗರು ಹಿಂದುತ್ವವನ್ನು ಯಾವ ರೀತಿ ದ್ವೇಷಿಸುತ್ತಾರೆ ಎಂಬುದು ಈ ಘಟನೆಯಿಂದ ಮತ್ತೆ ಮತ್ತೆ ಸಾಬೀತಾಗಿದೆ. ಮಾತ್ರವಲ್ಲದೆ ಕೇಸರಿ ತೊಟ್ಟರೆ ಎಲ್ಲಿ ಮುಸಲ್ಮಾನರ ವೋಟಿಗೆ ತೊಂದರೆಯಾಗುತ್ತದೋ ಎಂಬ ಭಯದಿಂದ ಸಿದ್ಧರಾಮಯ್ಯ ಈ ರೀತಿ ವರ್ತಿಸಿರುತ್ತಾರೆ. ಸಮಸ್ತ ಹಿಂದೂ ಸಮಾಜ ಕಾಂಗ್ರೆಸ್ ನ ಹಿಂದೂ ವಿರೋಧಿ ನೀತಿಯ ಹೀನ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started