ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ,Continue reading “ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
Monthly Archives: January 2022
ಬಸ್ತಿ ವಾಮನ್ ಶೆಣೈ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ: ಕೊಂಕಣಿ ಸಾಹಿತ್ಯ ಲೋಕದ ದಿಗ್ಗಜ, ಅಪ್ರತಿಮ ಸಂಘಟಕ, ವಿಶ್ವ ಕೊಂಕಣಿ ಪ್ರತಿಷ್ಠಾನದ ಸಂಸ್ಥಾಪಕ ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಸ್ತಿ ವಾಮನ್ ಶೆಣೈ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಸಂತಾಪ ವ್ಯಕ್ತಪಡಿಸಿದೆ. ಬಸ್ತಿ ವಾಮನ್ ಶೆಣೈಯವರ ನಿಧನ ಕೊಂಕಣಿ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್
ಉಡುಪಿ: ಮನೋಲ್ಲಾಸ ಹಾಗೂ ಮನೋವಿಕಾಸಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ರೀಡಾ ಭಾರತಿ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಜ.2ರಂದು ಅಜ್ಜರಕಾಡು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಉಡುಪಿ ಶಾಸಕ, ಜಿಲ್ಲಾ ಕ್ರೀಡಾ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಕೆ.ರಘುಪತಿ ಭಟ್ ಕ್ರೀಡಾಭಿಮಾನಿಗಳಿಗೆ ಕರೆ ನೀಡಿದರು. ಅವರು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ.2ರಂದು ನಡೆಯುವ ಜಿಲ್ಲಾ ಕ್ರೀಡಾ ಸಮ್ಮೇಳನ 2021-22 ಇದರ ಪೂರ್ವ ಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೈಹಿಕ ಶ್ರಮContinue reading “ಜಿಲ್ಲಾ ಕ್ರೀಡಾ ಸಮ್ಮೇಳನ ಯಶಸ್ವಿಗೊಳಿಸಿ: ಶಾಸಕ ರಘುಪತಿ ಭಟ್”